ದೇಶ- ವಿದೇಶ

ವಿಶ್ವದಾದ್ಯಂತ ಮೈಕ್ರೋಸಾಫ್ಟ್ ಸರ್ವರ್ ನಲ್ಲಿ ಭಾರೀ ವ್ಯತ್ಯಯ

ವಿಶ್ವದಾದ್ಯಂತ ಮೈಕ್ರೋಸಾಫ್ಟ್‌  ವೇರ್‌ ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಪರಿಣಾಮ ಹಲವು ವಿಮಾನಗಳ ಸೇವೆಯಲ್ಲಿ ವಿಳಂಬ ಹಾಗೂ ಭಾರೀ ವ್ಯತ್ಯಯ ಉಂಟಾಯಿತು. ದೆಹಲಿ, ನ್ಯೂಯಾರ್ಕ್‌ ಸೇರಿದಂತೆ ಹಲವೆಡೆ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಈ ಮೈಕ್ರೋಸಾಫ್ಟ್‌ ಸರ್ವರ್‌ ನಲ್ಲಿ ವ್ಯತ್ಯಯವಾದ ಪರಿಣಾಮ ಜಾಗತಿಕ ಮಟ್ಟದಲ್ಲಿ ಬಹಳಷ್ಟು ಸಮಸ್ಯೆಗಳು ಆಗಿದೆ. ವಿಶ್ವದಾದ್ಯಂತ ವಿಮಾನ ಸಂಚಾರ, ಸೇವೆಯಲ್ಲಿ ವ್ಯತ್ಯಯವಾಗಿದ್ರೆ ಲಂಡನ್‌ ಸ್ಟಾಕ್‌ ಎಕ್ಸ್ ಚೇಂಜ್‌ ಸೇವೆ ಕೂಡ ಸ್ಥಗಿತ ಗೊಡಿತ್ತು. ಅಲ್ಲದೆ ಭಾರತದಲ್ಲೂ ವಿಮಾನ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ರವಾನೆ ಮಾಡಲಾಗಿದೆ. ಎಸ್‌.ಎಂ.ಎಸ್‌ ಮೂಲಕ ಪ್ರಯಾಣಿಕರಿಗೆ ಏರ್‌ ಲೈನ್ಸ್‌ ಕಂಪನಿಗಳು ಮಾಹಿತಿ ನೀಡುತ್ತಿವೆ. ಪ್ರಯಾಣಿಕರು ಬಹಳ ಬೇಗನೇ ವಿಮಾನ ನಿಲ್ದಾಣಕ್ಕೆ ಬಂದು ಮ್ಯಾನ್ಯುಯಲ್‌ ಆಗಿ ಚೆಕ್‌ ಇನ್‌ ಮಾಡಲು ಸೂಚನೆ ನೀಡಲಾಗುತ್ತಿದೆ.

ಅಲ್ಲದೆ ಟೆಲಿಕಾಂ ಕಂಪನಿಗಳಿಗೂ ಈ ಮೈಕ್ರೋಸಾಫ್ಟ್‌ ಸರ್ವರ್‌ ಸಮಸ್ಯೆ ತಟ್ಟಿದ್ದು, ಆಸ್ಟ್ರೇಲಿಯಾ ಸರ್ಕಾರ ಈ ಬಗ್ಗೆ ತುರ್ತು ಸಭೆ ನಡೆಸಲು ಮುಂದಾಗಿದೆ. ಇನ್ನು ಅಮೇರಿಕಾದ ಎಲ್ಲಾ ವಿಮಾನಗಳ ಸಂಚಾರದಲ್ಲೂ ಕೂಡ ವ್ಯತ್ಯಯವಾಗಿದೆ. ಇದರಿಂದಾಗಿ ಭಾರತದ ಇಂಡಿಗೋ, ಸ್ಪೈಸ್‌ ಜೆಟ್, ಏರ್‌ ಇಂಡಿಯಾ ವಿಮಾನ ಸಂಚಾರಕ್ಕೂ ಅಡಚಣೆಯಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

28 mins ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

30 mins ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

1 hour ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

2 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

2 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

2 hours ago