ದೇಶ- ವಿದೇಶ

ವಿಶ್ವದಾದ್ಯಂತ ಮೈಕ್ರೋಸಾಫ್ಟ್ ಸರ್ವರ್ ನಲ್ಲಿ ಭಾರೀ ವ್ಯತ್ಯಯ

ವಿಶ್ವದಾದ್ಯಂತ ಮೈಕ್ರೋಸಾಫ್ಟ್‌  ವೇರ್‌ ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಪರಿಣಾಮ ಹಲವು ವಿಮಾನಗಳ ಸೇವೆಯಲ್ಲಿ ವಿಳಂಬ ಹಾಗೂ ಭಾರೀ ವ್ಯತ್ಯಯ ಉಂಟಾಯಿತು. ದೆಹಲಿ, ನ್ಯೂಯಾರ್ಕ್‌ ಸೇರಿದಂತೆ ಹಲವೆಡೆ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಈ ಮೈಕ್ರೋಸಾಫ್ಟ್‌ ಸರ್ವರ್‌ ನಲ್ಲಿ ವ್ಯತ್ಯಯವಾದ ಪರಿಣಾಮ ಜಾಗತಿಕ ಮಟ್ಟದಲ್ಲಿ ಬಹಳಷ್ಟು ಸಮಸ್ಯೆಗಳು ಆಗಿದೆ. ವಿಶ್ವದಾದ್ಯಂತ ವಿಮಾನ ಸಂಚಾರ, ಸೇವೆಯಲ್ಲಿ ವ್ಯತ್ಯಯವಾಗಿದ್ರೆ ಲಂಡನ್‌ ಸ್ಟಾಕ್‌ ಎಕ್ಸ್ ಚೇಂಜ್‌ ಸೇವೆ ಕೂಡ ಸ್ಥಗಿತ ಗೊಡಿತ್ತು. ಅಲ್ಲದೆ ಭಾರತದಲ್ಲೂ ವಿಮಾನ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ರವಾನೆ ಮಾಡಲಾಗಿದೆ. ಎಸ್‌.ಎಂ.ಎಸ್‌ ಮೂಲಕ ಪ್ರಯಾಣಿಕರಿಗೆ ಏರ್‌ ಲೈನ್ಸ್‌ ಕಂಪನಿಗಳು ಮಾಹಿತಿ ನೀಡುತ್ತಿವೆ. ಪ್ರಯಾಣಿಕರು ಬಹಳ ಬೇಗನೇ ವಿಮಾನ ನಿಲ್ದಾಣಕ್ಕೆ ಬಂದು ಮ್ಯಾನ್ಯುಯಲ್‌ ಆಗಿ ಚೆಕ್‌ ಇನ್‌ ಮಾಡಲು ಸೂಚನೆ ನೀಡಲಾಗುತ್ತಿದೆ.

ಅಲ್ಲದೆ ಟೆಲಿಕಾಂ ಕಂಪನಿಗಳಿಗೂ ಈ ಮೈಕ್ರೋಸಾಫ್ಟ್‌ ಸರ್ವರ್‌ ಸಮಸ್ಯೆ ತಟ್ಟಿದ್ದು, ಆಸ್ಟ್ರೇಲಿಯಾ ಸರ್ಕಾರ ಈ ಬಗ್ಗೆ ತುರ್ತು ಸಭೆ ನಡೆಸಲು ಮುಂದಾಗಿದೆ. ಇನ್ನು ಅಮೇರಿಕಾದ ಎಲ್ಲಾ ವಿಮಾನಗಳ ಸಂಚಾರದಲ್ಲೂ ಕೂಡ ವ್ಯತ್ಯಯವಾಗಿದೆ. ಇದರಿಂದಾಗಿ ಭಾರತದ ಇಂಡಿಗೋ, ಸ್ಪೈಸ್‌ ಜೆಟ್, ಏರ್‌ ಇಂಡಿಯಾ ವಿಮಾನ ಸಂಚಾರಕ್ಕೂ ಅಡಚಣೆಯಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

7 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

7 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

7 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

7 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

7 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

8 hours ago