ದೇಶ- ವಿದೇಶ

UPI ಸೇವೆಯಲ್ಲಿ ವ್ಯತ್ಯಯ : ಗೂಗಲ್‌ ಪೇ, ಫೋನ್ ಪೇ ಬಳಕೆದಾರರಿಗೆ ಸಮಸ್ಯೆ

ಹೊಸದಿಲ್ಲಿ : ಮೊಬೈಲ್‌ನಿಂದ ಹಣ ಪಾವತಿ ಮಾಡುವ ಯುಪಿಐ ಸೇವೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ದೇಶಾದ್ಯಂತ ವ್ಯತ್ಯಯ ಕಂಡು ಬಂದಿದೆ. ಇದರಿಂದ ಡಿಜಿಟಲ್‌ ಬಳಕೆದಾರರು ವಹಿವಾಟು ನಡೆಸಲು ಪರದಾಡಿದರು.

ಕಳೆದೊಂದು ತಿಂಗಳಲ್ಲಿ ಮೂರನೇ ಬಾರಿಗೆ ಯುಪಿಐ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದ್ದು, ಇದರಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನಿಯಂತ್ರಣದ ಎನ್‌ಸಿಪಿಐ ನಿರ್ವಹಿಸುವ ತ್ವರಿತ ಪಾವತಿಗೆ ಅಡ್ಡಿಯಾಗಿದೆ.

ಡೌನ್‌ಡೆಕ್ಟರ್‌ ನೀಡಿದ ಮಾಹಿತಿ ಪ್ರಕಾರ, ಮಧ್ಯಾಹ್ನ ವೇಳೆಗೆ ಯುಪಿಐ ಸಂಬಂಧಿತ ಸಮಸ್ಯೆಗಳು ವರದಿಯಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಎನ್‌ಪಿಸಿಐ ದೇಶದ ಹಲವೆಡೆ ಪಾವತಿ ಸಮಸ್ಯೆ ಎದುರಾಗಿದೆ. ಇದನ್ನು ತ್ವರಿತಗತಿಯಲ್ಲಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದೆ.

ಬಳಕೆದಾರರ ಆಕ್ರೋಶ
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದು, ಯುಪಿಐ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದ್ದಾರೆ.

ಈ ದಿಢೀರ್‌ ತೊಂದರೆಯಿಂದ ಯುಪಿಐ ಮೇಲೆ ಪರಿಣಾಮ ಬೀರಿದ್ದು, ಇದಕ್ಕಿಂತ ನಗದು ವಹಿವಾಟೇ ಮೇಲು ಎಂದು ಬರೆದುಕೊಂಡಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

7 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago