ದೇಶ- ವಿದೇಶ

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಗದ್ದುಗೆ ಹಿಡಿಯಲು ಸರ್ಕಸ್ ನಡೆಸುತ್ತಿದೆ. ಇನ್ನೊಂದೆಡೆ, ಬದ್ಧ ಎದುರಾಳಿಗಳಾಗಿರುವ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ವದಂತಿ ಬಗ್ಗೆ ವರದಿಯಾಗಿದೆ.

ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳು ಮೈತ್ರಿಯ ಮಾತುಕತೆ ನಡೆಸಿವೆ ಎಂಬ ವರದಿಗಳು ಬುಧವಾರ ಹೊರಬಂದಿದ್ದವು. ಆದರೆ ಈ ವರದಿಗಳನ್ನು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ತಳ್ಳಿಹಾಕಿದ್ದಾರೆ.

6 ತಿಂಗಳು ಯಾವುದೇ ಸಮಸ್ಯೆ ಮಾಡಲ್ಲ
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲಿರುವ ನಟ ಕಂ ರಾಜಕಾರಣಿ ವಿಜಯ್ ಅವರಿಗೆ ಪಕ್ಷವು ಕನಿಷ್ಠ 6 ತಿಂಗಳ ಕಾಲ ಯಾವುದೇ ಅಡೆತಡೆಗಳನ್ನು ಸೃಷ್ಟಿಸುವುದಿಲ್ಲ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ಡಿಎಂಕೆ ಯಾವುದೇ ರಾಜಕೀಯ ಗೊಂದಲ ಸೃಷ್ಟಿ ಮಾಡಲ್ಲ. ಮುಂದಿನ ದಿನಗಳಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಇನ್ನೊಂದು ಚುನಾವಣೆಯನ್ನು ಡಿಎಂಕೆ ಬಯಸುವುದಿಲ್ಲ. ಆರು ತಿಂಗಳ ಕಾಲ ವಿಜಯ್ ಅವರ ಆಡಳಿತವನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಎಐಡಿಎಂಕೆ ಆಫರ್ ತಿರಸ್ಕರಿಸಿದ ಡಿಎಂಕೆ
ಸರ್ಕಾರ ರಚನೆ ಸಂಬಂಧ ಡಿಎಂಕೆ ಜೊತೆ ಮೈತ್ರಿಗೆ ಎಐಡಿಎಂಕೆ ಪ್ರಯತ್ನಿಸಿದೆ ಎಂದು ವರದಿಯಾಗಿದೆ. ಮತದಾರರ ತೀರ್ಪಿನಂತೆ ವಿರೋಧ ಪಕ್ಷದಲ್ಲಿರುವುದಾಗಿ ಡಿಎಂಕೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago