ತಮಿಳುನಾಡು: ಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಮೇಲ್ನೋಟಕ್ಕೆ ವಿರೋಧಿಗಳಂತೆ ನಾಟಕವಾಡುತ್ತಿದ್ದಾರೆ. ಆದರೆ ಈ ಎರಡೂ ಪಕ್ಷಗಳು ಒಳಗೊಳಗೇ ವಿವೇಚನಾ ಒಪ್ಪಂದ ಮಾಡಿಕೊಂಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಆಕ್ರೋಶ ಹೊರಹಾಕಿದರು.
ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಕರುಣಾನಿಧಿ ಜನ್ಮ ಶತಮಾನೋತ್ಸವ ನೆನಪಿನಲ್ಲಿ ನಾಣ್ಯ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಸಿಎಂ ಸ್ಟಾಲಿನ್ ಅವರು ಹೇಳಿದ್ದರು. ಆದರೆ ನನಗೆ ಬಂದ ಆಹ್ವಾನ ಪತ್ರಿಕೆಯಲ್ಲಿ ರಾಜ್ಯ ಸರ್ಕಾರದ ಲಾಂಛನವಿತ್ತು. ಇದನ್ನು ಸ್ವತಃ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರೇ ಕಳುಹಿಸಿದ್ದರು. ಇದು ರಾಜ್ಯ ಸರ್ಕಾರದ ಕಾರ್ಯಕ್ರಮ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಕಿಡಿಕಾರಿದರು.
ಡಿಎಂಕೆ ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿದ್ದರೂ ಸಹಾ ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಿರಲಿಲ್ಲ. ತಮ್ಮ ಭ್ರಷ್ಟ ಸರ್ಕಾರವನ್ನು ರಕ್ಷಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವು ಕೇಳಲು ಪ್ರಯತ್ನಿಸುತ್ತಿದೆ. ಕಳೆದ ವಾರದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಎಲ್. ಮುರುಗನ್, ಕೆ. ಅಣ್ಣಾಮಲೈ ಅವರು ಭಾಗಿಯಾಗಿದ್ದರು ಎಂದೂ ಮಾಹಿತಿ ನೀಡಿದರು.
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…