ದೇಶ- ವಿದೇಶ

ದೇಶದ ಮೂರನೇ ಶ್ರೀಮಂತ ಸಿಎಂ ಯಾರು ಗೊತ್ತಾ.?

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಮೂರನೇ ಶ್ರೀಮಂತ ಸಿಎಂ ಆಗಿ ಹೊರ ಹೊಮ್ಮಿದ್ದಾರೆ.

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 3ನೇ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ದೇಶದ ಒಟ್ಟು 30 ಸಿಎಂಗಳ ಪಟ್ಟಿ ಬಿಡುಗಡೆ ಮಾಡಿದ್ದು, 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂ.ಗಳಷ್ಟಿದ್ದು, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಅವರು 332 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣೆ ವೇಳೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್ ಆಧರಿಸಿ ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆಯು ಭಾರತದ ಶ್ರೀಮಂತ ಮುಖ್ಯಮಂತ್ರಿಗಳ ಕುರಿತ ವರದಿ ಬಿಡುಗಡೆ ಮಾಡಿದೆ.

ಜೊತೆಗೆ ದೇಶದ 30 ಮುಖ್ಯಮಂತ್ರಿಗಳು (ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಇದ್ದ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ) ಒಟ್ಟಾರೆ 1,600 ಕೋಟಿ ರು. ಆಸ್ತಿ ಹೊಂದಿದ್ದಾರೆ. ವಿಶೇಷವೆಂದರೆ 30 ಮುಖ್ಯಮಂತ್ರಿಗಳ ಒಟ್ಟಾರೆ ಆಸ್ತಿಯಲ್ಲಿ ಅರ್ಧಕ್ಕೂ ಹೆಚ್ಚು ಆಸ್ತಿಯನ್ನು ಆಂಧ್ರ ಮುಖ್ಯಮಂತ್ರಿಗಳೇ ಹೊಂದಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago