ದೇಶ- ವಿದೇಶ

ದೇಶದ ಮೂರನೇ ಶ್ರೀಮಂತ ಸಿಎಂ ಯಾರು ಗೊತ್ತಾ.?

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಮೂರನೇ ಶ್ರೀಮಂತ ಸಿಎಂ ಆಗಿ ಹೊರ ಹೊಮ್ಮಿದ್ದಾರೆ.

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 3ನೇ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ದೇಶದ ಒಟ್ಟು 30 ಸಿಎಂಗಳ ಪಟ್ಟಿ ಬಿಡುಗಡೆ ಮಾಡಿದ್ದು, 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂ.ಗಳಷ್ಟಿದ್ದು, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಅವರು 332 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣೆ ವೇಳೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್ ಆಧರಿಸಿ ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆಯು ಭಾರತದ ಶ್ರೀಮಂತ ಮುಖ್ಯಮಂತ್ರಿಗಳ ಕುರಿತ ವರದಿ ಬಿಡುಗಡೆ ಮಾಡಿದೆ.

ಜೊತೆಗೆ ದೇಶದ 30 ಮುಖ್ಯಮಂತ್ರಿಗಳು (ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಇದ್ದ ಹಿನ್ನೆಲೆಯಲ್ಲಿ ಕೈಬಿಡಲಾಗಿದೆ) ಒಟ್ಟಾರೆ 1,600 ಕೋಟಿ ರು. ಆಸ್ತಿ ಹೊಂದಿದ್ದಾರೆ. ವಿಶೇಷವೆಂದರೆ 30 ಮುಖ್ಯಮಂತ್ರಿಗಳ ಒಟ್ಟಾರೆ ಆಸ್ತಿಯಲ್ಲಿ ಅರ್ಧಕ್ಕೂ ಹೆಚ್ಚು ಆಸ್ತಿಯನ್ನು ಆಂಧ್ರ ಮುಖ್ಯಮಂತ್ರಿಗಳೇ ಹೊಂದಿರುವುದು ವಿಶೇಷವಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago