ಕೋಲ್ಕತ್ತಾ: ಇಲ್ಲಿನ ಆರ್ಜಿಕರ್ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ.
ಶನಿವಾರ ಕೋಲ್ಕತ್ತಾ ಸೆಷನ್ ಕೋರ್ಟ್ನ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿದ್ದ ಏಕಸದಸ್ಯ ಪೀಠ ಸಂಜಯ್ ರಾಯ್ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.
ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದಿದ್ದರು. ಈ ವೇಳೆ ಕೋರ್ಟ್ ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿದೆ.
2024ರ ಆಗಸ್ಟ್.9ರಂದು ಬೆಳಿಗ್ಗೆ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಒಪ್ಪಿಸಿತ್ತು.
ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್…
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…