ದೇಶ- ವಿದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ: ಇಲ್ಲಿನ ಆರ್‌ಜಿಕರ್‌ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ.

ಶನಿವಾರ ಕೋಲ್ಕತ್ತಾ ಸೆಷನ್‌ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್‌ ದಾಸ್‌ ಅವರಿದ್ದ ಏಕಸದಸ್ಯ ಪೀಠ ಸಂಜಯ್‌ ರಾಯ್‌ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

ಈ ಹಿನ್ನೆಲೆಯಲ್ಲಿ ಇಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್‌ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.

ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದಿದ್ದರು. ಈ ವೇಳೆ ಕೋರ್ಟ್‌ ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿದೆ.

2024ರ ಆಗಸ್ಟ್.‌9ರಂದು ಬೆಳಿಗ್ಗೆ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್‌ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಒಪ್ಪಿಸಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago