ಕೋಲ್ಕತ್ತಾ: ಇಲ್ಲಿನ ಆರ್ಜಿಕರ್ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ.
ಶನಿವಾರ ಕೋಲ್ಕತ್ತಾ ಸೆಷನ್ ಕೋರ್ಟ್ನ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿದ್ದ ಏಕಸದಸ್ಯ ಪೀಠ ಸಂಜಯ್ ರಾಯ್ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.
ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದಿದ್ದರು. ಈ ವೇಳೆ ಕೋರ್ಟ್ ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿದೆ.
2024ರ ಆಗಸ್ಟ್.9ರಂದು ಬೆಳಿಗ್ಗೆ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಒಪ್ಪಿಸಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…