Trump Tariff
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಅಮೆರಿಕದ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದರೂ ಕೂಡ ಅಮೆರಿಕದ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.10ರಷ್ಟು ಹೊಸ ಜಾಗತಿಕ ಶುಲ್ಕವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದನ್ನು ಅವರ ಸರ್ಕಾರದ ಆರ್ಥಿಕ ನೀತಿಯಲ್ಲಿ ಜಾರಿಗೆ ತಂದಲ್ಲಿ ಸುಂಕ ಹೇರಿಕೆಗೆ ಬಳಸುವ ಇತರೆ ಮಾರ್ಗಗಳನ್ನು ಉಪಯೋಗಿಸುವುದಾಗಿ ಹೇಳಿಕೊಂಡಿದ್ದಾರೆ. ಈ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿತ್ತು.
ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಜಾಗತಿಕ ಮಟ್ಟದಲ್ಲಿ ದೇಶಗಳೊಂದಿಗೆ ವ್ಯಾಪಾರ ನಿಯಂತ್ರಿಸುವ ಮತ್ತು ಶುಲ್ಕ ವಿಧಿಸುವ ಕ್ರಮಗಳನ್ನು ಹೊಂದಿದೆ. ತಮ್ಮ ಸರ್ಕಾರ ಮಾಡಿಕೊಂಡ ಬಹುತೇಕ ಒಪ್ಪಂದಗಳು ಇನ್ನೂ ಪರಿಣಾಮಕಾರಿಯಾಗಿವೆ ಎಂದು ಹೇಳಿ ವಿಶೇಷವಾಗಿ ಭಾರತವನ್ನು ಉಲ್ಲೇಖಿಸಿದ್ದರು. ಭಾರತ ಜೊತೆಗೆ ಒಪ್ಪಂದ ಮುಂದುವರಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ಟ್ರಂಪ್ ಹೇಳಿದರು.
ಎಲ್ಲ ಒಪ್ಪಂದಗಳು ನಾವು ಅದನ್ನು ಬೇರೆ ರೀತಿಯಲ್ಲಿ ಮಾಡಲಿದ್ದೇವೆ. ತಮ್ಮ ಸುಂಕ ಹೇರಿಕೆಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಿಬ್ಬರನ್ನೂ ನಾಮನಿರ್ದೇಶಿಸಿದ ಟ್ರಂಪ್, ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂಬುದು ನನ್ನ ಅಭಿಪ್ರಾಯ ಎಂದು ಟ್ರಂಪ್ ಪತ್ರಕರ್ತರಿಗೆ ಹೇಳಿದರು.
ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ನಿರಾಶಾದಾಯಕ ಎಂದು ಕರೆದ ಅವರು ಕನ್ಸರ್ವೇಟಿವ್ ಪ್ರಭಾವಿತ ನ್ಯಾಯಾಲಯದ ಕೆಲ ಸದಸ್ಯರು ಅವರ ವಿರುದ್ಧ ತೀರ್ಪು ನೀಡಿರುವುದಕ್ಕೆ ಖಂಡಿತವಾಗಿಯೂ ಮುಜುಗರ ತಂದಿದೆ ಎಂದರು. ಅವರ ಹೆಸರನ್ನು ಉಲ್ಲೇಖಿಸದೆ, ಟ್ರಂಪ್ ನ್ಯಾಯಮೂರ್ತಿಗಳ ಕ್ರಿಯೆಯನ್ನು ಅತ್ಯಂತ ದೇಶಭಕ್ತಿ ವಿರೋಧಿ ಮತ್ತು ನಮ್ಮ ಸಂವಿಧಾನಕ್ಕೆ ನಿಷ್ಠೆಯಿಲ್ಲದವರು ಎಂದರು. ತಮ್ಮ ಶುಲ್ಕದಿಂದ ಸಿಕ್ಕ ಸುಮಾರು 133 ಬಿಲಿಯನ್ ಡಾಲರ್ ಮರುಪಾವತಿಸುವ ವಿಷಯದ ಬಗ್ಗೆ, ಕಾನೂನು ಹೋರಾಟವು ವರ್ಷಗಳವರೆಗೆ ಸಾಗಬಹುದು ಎಂದರು.
ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ, ಕನ್ಸರ್ವೇಟಿವ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ರಚಿಸಿದ 6-3 ತೀರ್ಪಿನಲ್ಲಿ, ಟ್ರಂಪ್ 1977 ಕಾನೂನನ್ನು ಬಳಸಿ ಶುಲ್ಕ ವಿಧಿಸುವ ಶಕ್ತಿ ಅವರ ಅಧಿಕಾರಕ್ಕಿಂತ ಮೇಲಿನದ್ದಾಗಿದೆ ಎಂದು ತೀರ್ಪು ನೀಡಿ ಕೆಳ ನ್ಯಾಯಾಲಯದ ತೀರ್ಪನ್ನು ಮಾನ್ಯ ಮಾಡಿತು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…