ದೇಶ- ವಿದೇಶ

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಅಮೆರಿಕದ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದರೂ ಕೂಡ ಅಮೆರಿಕದ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.10ರಷ್ಟು ಹೊಸ ಜಾಗತಿಕ ಶುಲ್ಕವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದನ್ನು ಅವರ ಸರ್ಕಾರದ ಆರ್ಥಿಕ ನೀತಿಯಲ್ಲಿ ಜಾರಿಗೆ ತಂದಲ್ಲಿ ಸುಂಕ ಹೇರಿಕೆಗೆ ಬಳಸುವ ಇತರೆ ಮಾರ್ಗಗಳನ್ನು ಉಪಯೋಗಿಸುವುದಾಗಿ ಹೇಳಿಕೊಂಡಿದ್ದಾರೆ. ಈ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿತ್ತು.

ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಜಾಗತಿಕ ಮಟ್ಟದಲ್ಲಿ ದೇಶಗಳೊಂದಿಗೆ ವ್ಯಾಪಾರ ನಿಯಂತ್ರಿಸುವ ಮತ್ತು ಶುಲ್ಕ ವಿಧಿಸುವ ಕ್ರಮಗಳನ್ನು ಹೊಂದಿದೆ. ತಮ್ಮ ಸರ್ಕಾರ ಮಾಡಿಕೊಂಡ ಬಹುತೇಕ ಒಪ್ಪಂದಗಳು ಇನ್ನೂ ಪರಿಣಾಮಕಾರಿಯಾಗಿವೆ ಎಂದು ಹೇಳಿ ವಿಶೇಷವಾಗಿ ಭಾರತವನ್ನು ಉಲ್ಲೇಖಿಸಿದ್ದರು. ಭಾರತ ಜೊತೆಗೆ ಒಪ್ಪಂದ ಮುಂದುವರಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ಟ್ರಂಪ್ ಹೇಳಿದರು.

ಎಲ್ಲ ಒಪ್ಪಂದಗಳು ನಾವು ಅದನ್ನು ಬೇರೆ ರೀತಿಯಲ್ಲಿ ಮಾಡಲಿದ್ದೇವೆ. ತಮ್ಮ ಸುಂಕ ಹೇರಿಕೆಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಿಬ್ಬರನ್ನೂ ನಾಮನಿರ್ದೇಶಿಸಿದ ಟ್ರಂಪ್, ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂಬುದು ನನ್ನ ಅಭಿಪ್ರಾಯ ಎಂದು ಟ್ರಂಪ್ ಪತ್ರಕರ್ತರಿಗೆ ಹೇಳಿದರು.

ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ನಿರಾಶಾದಾಯಕ ಎಂದು ಕರೆದ ಅವರು ಕನ್ಸರ್ವೇಟಿವ್ ಪ್ರಭಾವಿತ ನ್ಯಾಯಾಲಯದ ಕೆಲ ಸದಸ್ಯರು ಅವರ ವಿರುದ್ಧ ತೀರ್ಪು ನೀಡಿರುವುದಕ್ಕೆ ಖಂಡಿತವಾಗಿಯೂ ಮುಜುಗರ ತಂದಿದೆ ಎಂದರು. ಅವರ ಹೆಸರನ್ನು ಉಲ್ಲೇಖಿಸದೆ, ಟ್ರಂಪ್ ನ್ಯಾಯಮೂರ್ತಿಗಳ ಕ್ರಿಯೆಯನ್ನು ಅತ್ಯಂತ ದೇಶಭಕ್ತಿ ವಿರೋಧಿ ಮತ್ತು ನಮ್ಮ ಸಂವಿಧಾನಕ್ಕೆ ನಿಷ್ಠೆಯಿಲ್ಲದವರು ಎಂದರು. ತಮ್ಮ ಶುಲ್ಕದಿಂದ ಸಿಕ್ಕ ಸುಮಾರು 133 ಬಿಲಿಯನ್ ಡಾಲರ್ ಮರುಪಾವತಿಸುವ ವಿಷಯದ ಬಗ್ಗೆ, ಕಾನೂನು ಹೋರಾಟವು ವರ್ಷಗಳವರೆಗೆ ಸಾಗಬಹುದು ಎಂದರು.

ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ, ಕನ್ಸರ್ವೇಟಿವ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ರಚಿಸಿದ 6-3 ತೀರ್ಪಿನಲ್ಲಿ, ಟ್ರಂಪ್ 1977 ಕಾನೂನನ್ನು ಬಳಸಿ ಶುಲ್ಕ ವಿಧಿಸುವ ಶಕ್ತಿ ಅವರ ಅಧಿಕಾರಕ್ಕಿಂತ ಮೇಲಿನದ್ದಾಗಿದೆ ಎಂದು ತೀರ್ಪು ನೀಡಿ ಕೆಳ ನ್ಯಾಯಾಲಯದ ತೀರ್ಪನ್ನು ಮಾನ್ಯ ಮಾಡಿತು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

44 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

46 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

48 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

50 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

54 mins ago