ದೇಶ- ವಿದೇಶ

ನೀಲಿ ಚಿತ್ರ ತಾರೆಗೆ ಹಣ ನೀಡಿದ ಆರೋಪ ಪ್ರಕರಣ: ಡೊನಾಲ್ಡ್‌ ಟ್ರಂಪ್‌ ದೋಷಿ

ನ್ಯೂಯಾರ್ಕ್‌: 2016 ರ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಮಾತನಾಡದಿರಲು ನೀಲಿಚಿತ್ರಗಳ ತಾರೆಗೆ ಹಣ ಆಮಿಷ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಇಲ್ಲಿನ ಮ್ಯಾನ್‌ಹಟನ್‌ ನ್ಯಾಯಾಯಲಯದ 11ನೇ ನ್ಯಾಯಾದೀಶರ ಸಮಿತಿ ಗುರುವಾರ ಸರ್ವಾನುಮತದಿಂದ ಈ ತೀರ್ಪುನ್ನು ನೀಡಿವೆ. ಈ ಪ್ರಕಟಣೆ ಬೆನ್ನಲ್ಲೇ ಅಪರಾಧಕ್ಕಾಗಿ ಶಿಕ್ಷೆಗೆ ಒಳಗಾದ ಮೊದಲ ಅಧ್ಯಕ್ಷ ಎಂಬ ಹೊಸ ಚರಿತ್ರೆಯನ್ನು ಟ್ರಂಪ್‌ ಸೃಷ್ಠಿಸಿದ್ದಾರೆ.

ನ್ಯಾಯಾಲಯ ಟ್ರಂಪ್‌ನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದು, ಟ್ರಂಪ್‌ಗೆ ಬಂಧನದ ಭೀತಿ ಎದುರಾಗಿದೆ. ಮತ್ತು ಯಾವ ಪ್ರಮಾಣದ ಶಿಕ್ಷೆಯನ್ನು ನ್ಯಾಯಾಲಯದ ವಿಧಿಸಲಿದೆ ಎಂಬುದು ಮುಂದಿನ ವಾರ ತಿಳಿಯಲಿದೆ ಎಂದು ವರದಿಯಾಗಿದೆ.

2016ರ ಚುನಾವಣೆ ವೇಳೆ ನೀಲಿ ಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರು ತಾವು ಟ್ರಂಪ್‌ ಜತೆ ಲೈಂಗಿಕ ಸಂಪರ್ಕ ಹೊಂದಿದ್ದೆ ಎಂದು ಹೇಳಿದ್ದರು. ಮತ್ತೆ ಈ ರೀತಿಯ ಹೇಳಿಕೆ ನೀಡದಂತೆ ಮನವಿ ಮಾಡಿ, ನಟಿಗೆ ಭಾರೀ ಪ್ರಮಾಣದ ಹಣ ನೀಡಲಾಗಿತ್ತು ಎಂದು ಟ್ರಂಪ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಟ್ರಂಪ್‌ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಮಿಚೆಲ್‌ ಕೊಹೇನ್‌ ಅವರು ನಟಿ ಬರೋಬ್ಬರಿ 1.3 ಲಕ್ಷ ಡಾಲರ್‌ ಹಣ ನೀಡಿದ್ದರು. ಈ ಪಾವತಿಯನ್ನು ಮಾಡಿದ್ದು ಏಕೆ ಮತ್ತು ಹೇಗೆ? ಎಂಬ ಅಂಶಗಳ ಮೇಲೆ ವಿಚಾರಣೆಗೆ ಒತ್ತು ನೀಡಲಾಗಿದೆ ಎಂದು ವರದಿಯಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

3 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

3 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

3 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago