ದೇಶ- ವಿದೇಶ

ಕಮಲಾ ಹ್ಯಾರಿಸ್‌ ವಿರುದ್ಧ ಜನಾಂಗೀಯ ದಾಳಿ ನಡೆಸಿದ ಡೊನಾಲ್ಡ್‌ ಟ್ರಂಪ್‌!

ಅಮೇರಿಕ: ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಭಾರತೀಯ ಮೂಲದ ಅಮೇರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಬಗ್ಗೆ ಡೊನಾಲ್ಡ್‌ ಟ್ರಂಪ್‌ ಜನಾಂಗೀಯ ನಿಂದನೆ ಹೇಳಿಕೆ ನೀಡುವ ಮೂಲಕ ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಟ್ರಂಪ್‌ ಕಮಲಾ ಹ್ಯಾರಿಸ್‌ ಭಾರತೀಯರೇ? ಅಥವಾ ಕಪ್ಪು ವರ್ಣೀಯ ಮಹಿಳೆಯೇ? ಎಂದು ಪ್ರಶ್ನಿಸಿದ್ದಾರೆ.

ಚಿಕಾಗೋದ ಕಪ್ಪು ವರ್ಣೀಯ ಪ್ರತಿಕೋದ್ಯಮಿಗಳ ರಾಷ್ಟ್ರೀಯ ಸಂಘದ ಸಮ್ಮೇಳನದಲ್ಲಿ ಮಾತನಾಡಿರುವ ಟ್ರಂಪ್‌, ಕಮಲಾ ಹ್ಯಾರಿಸ್‌ ಬಗ್ಗೆ ನನಗೆ ಪರೋಕ್ಷವಾಗಿ ಗೊತ್ತು. ಮೊದಲಿನಿಂದಲೂ ಅವರು ತಮ್ಮನ್ನು ಭಾರತೀಯರು ಎಂದೇ ಬಿಂಬಿಸಿಕೊಂಡಿದ್ದರು. ಆದರೆ ಈಗ ಕಪ್ಪುವರ್ಣೀಯರು ಎಂದು ಗುರುತಿಸಿಕೊಳ್ಳಲು ಬಯಸುತ್ತಿದ್ದಾರೆ. ಹಾಗಾಗಿ ಅವರು ಕಪ್ಪುವರ್ಣೀಯರೋ ಅಥವಾ ಭಾರತೀಯರೋ ಎಂಬ ಅನುಮಾನ ಮೂಡುತ್ತಿದೆ. ಈ ಬಗ್ಗೆ ನಿಮ್ಮಲ್ಲಿ ಯಾರಾದೂರ ಪರಿಶೀಲನೆ ಮಾಡಿ ಎಂದು ಟ್ರಂಪ್‌ ಹೇಳಿದ್ದಾರೆ.

ಟ್ರಂಪ್‌ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಡೆಮಾಕ್ರೆಟಿಕ್‌ ಪಕ್ಷವು, ಟ್ರಂಪ್‌ ಅಭ್ಯರ್ಥಿಗೆ ಅಗೌರವ ತೋರುವ ಮೂಲಕ ಮತಗಳನ್ನು ಇಬ್ಬಾಗವಾಗಿಸುವ ತಂತ್ರ ಇದಾಗಿದೆ. ಟ್ರಂಪ್‌, ಹ್ಯಾರಿಸ್‌ ವಿರುದ್ಧ ತಪ್ಪು ಸಂದೇಶ ಸಾರುತ್ತಿದ್ದಾರೆ ಎಂದು ಕಿಡಿಕಾರಿದೆ.

ಕಮಲ ಹ್ಯಾರಿಸ್‌ ತಾಯಿ ಮೂಲತಃ ಭಾರತೀಯರು ಹಾಗೂ ಆಕೆಯ ತಂದೆ ಜಮೈಕಾದವರಾಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago