ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಭಾರತ ಸರ್ಕಾರ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ಅಜ್ಞಾನಪೂರ್ವ ಹೇಳಿಕೆ ಎಂದು ಖಂಡಿಸಿದೆ.
ಈ ವಿವಾದಕ್ಕೆ ಕಾರಣವಾದದ್ದು ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡ ಅಮೇರಿಕಾದ ಪ್ರಮುಖ ಸಂಪ್ರದಾಯವಾದಿ ಲೇಖಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್ಕಾಸ್ಟ್.
ಅದರಲ್ಲಿ ಭಾರತ ಸೇರಿದಂತೆ ಕೆಲವು ದೇಶಗಳನ್ನು ಅವಮಾನಕಾರಿ ರೀತಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ವಲಸೆ ನೀತಿ ಮತ್ತು ಜನ್ಮಸಿದ್ಧ ಪೌರತ್ವದ ಕುರಿತು ತೀವ್ರ ಟೀಕೆಗಳನ್ನು ಮಾಡಲಾಗಿತ್ತು.
ಟ್ರಂಪ್ ಟೀಕೆ ಕುರಿತು ರಣಧೀರ್ ಜೈಸ್ವಾಲ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದು, ಇಂತಹ ಹೇಳಿಕೆಗಳು ಅಜ್ಞಾನಪೂರ್ಣವಾಗಿದ್ದು, ಅಸಮಂಜಸ ಹಾಗೂ ಕೆಟ್ಟ ಅಭಿರುಚಿಯುಳ್ಳದ್ದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಈ ಘಟನೆಯಿಂದ ಭಾರತದಲ್ಲಿ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಟ್ರಂಪ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ವಿಚಾರ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…