ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಭಾರತ ಸರ್ಕಾರ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ಅಜ್ಞಾನಪೂರ್ವ ಹೇಳಿಕೆ ಎಂದು ಖಂಡಿಸಿದೆ.
ಈ ವಿವಾದಕ್ಕೆ ಕಾರಣವಾದದ್ದು ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡ ಅಮೇರಿಕಾದ ಪ್ರಮುಖ ಸಂಪ್ರದಾಯವಾದಿ ಲೇಖಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್ಕಾಸ್ಟ್.
ಅದರಲ್ಲಿ ಭಾರತ ಸೇರಿದಂತೆ ಕೆಲವು ದೇಶಗಳನ್ನು ಅವಮಾನಕಾರಿ ರೀತಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ವಲಸೆ ನೀತಿ ಮತ್ತು ಜನ್ಮಸಿದ್ಧ ಪೌರತ್ವದ ಕುರಿತು ತೀವ್ರ ಟೀಕೆಗಳನ್ನು ಮಾಡಲಾಗಿತ್ತು.
ಟ್ರಂಪ್ ಟೀಕೆ ಕುರಿತು ರಣಧೀರ್ ಜೈಸ್ವಾಲ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದು, ಇಂತಹ ಹೇಳಿಕೆಗಳು ಅಜ್ಞಾನಪೂರ್ಣವಾಗಿದ್ದು, ಅಸಮಂಜಸ ಹಾಗೂ ಕೆಟ್ಟ ಅಭಿರುಚಿಯುಳ್ಳದ್ದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಈ ಘಟನೆಯಿಂದ ಭಾರತದಲ್ಲಿ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಟ್ರಂಪ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ವಿಚಾರ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿವೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ…
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…
ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…
ಬೆಳಗಾವಿ: ಕಾಂಗ್ರೆಸ್ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…