ಕಾಶ್ಮೀರ ವಿವಾದ : ಶಾಶ್ವತ ಪರಿಹಾರಕ್ಕೆ ಸಿದ್ಧ ಎಂದ ಟ್ರಂಪ್

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು ಸಿದ್ಧ ಎಂದು ಘೋಷಿಸಿದ್ದಾರೆ.

ಕದನ ವಿರಾಮ ಘೋಷಿಸಿದ್ದಕ್ಕೆ ಶುಭಕೋರಿದ ಟ್ರಂಪ್ ಈ ಐತಿಹಾಸಿಕ ನಿರ್ಧಾರಕ್ಕೆ ಅಮೆರಿಕ ಸಹಾಯ ಮಾಡಲು ಸಾಧ್ಯವಾಗಿದ್ದಕ್ಕೆ ನನಗೆ ಹೆಮ್ಮೆ ಇದೆ. ಇದರ ಬಗ್ಗೆ ಚರ್ಚೆ ಮಾಡದಿದ್ದರೂ, ನಾನು ಈ ಎರಡು ದೇಶಗಳೊಂದಿಗೆ ವ್ಯಾಪಾರವನ್ನು ಹೆಚ್ಚಿಸುತ್ತೇನೆ. ಕಾಶ್ಮೀರದ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ. ದೇವರು ಭಾರತ ಮತ್ತು ಪಾಕಿಸ್ತಾನದ ನಾಯಕರಿಗೆ ಒಳ್ಳೆಯದನ್ನು ಮಾಡಲಿ ಎಂದು ಆಶಿಸಿದ್ದಾರೆ.

ಪರಸ್ಪರ ಆಕ್ರಮಣವು ಲಕ್ಷಾಂತರ ಜನರ ಸಾವಿಗೆ ಕಾರಣವಾಗಬಹುದು. ಕಾಶ್ಮೀರ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಅವರೊಂದಿಗೆ ಕೆಲಸ ಮಾಡಲು ಸಿದ್ದ. ಉಭಯ ರಾಷ್ಟ್ರಗಳು ಬಯಸಿದರೆ ಅಮೆರಿಕ ಮಾತುಕತೆಯ ಮಧ್ಯಸ್ಥಿಕೆಯ ಜವಾಬ್ದಾರಿಯನ್ನು ನಿಭಾಯಿಸಲಿದೆ ಎಂದಿದ್ದಾರೆ. ಆದರೆ ಭಾರತ ಅಮೆರಿಕ ಅಧ್ಯಕ್ಷರ ಈ ಆಫರನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದು ಖಚಿತ.

ಕಾಶ್ಮೀರ ನಮ್ಮ ಅವಿಭಾಜ್ಯ ಅಂಗ ಎಂದು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿರುವ ಭಾರತ, ಈ ವಿಚಾರವಾಗಿ ಮೂರನೇ ಶಕ್ತಿಯ ಮಧ್ಯಸ್ಥಿಕೆಯನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

1972ರಲ್ಲಿ ನಡೆದ ಶಿವ್ಲಾ ಒಪ್ಪಂದದಂತೆ, ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಈ ಸಮಸ್ಯೆಯನ್ನು ಉಭಯ ರಾಷ್ಟ್ರಗಳು ಮಾತ್ರ ಪರಿಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಮೂರನೇ ಶಕ್ತಿಯ ಮಧ್ಯಸ್ಥಿಕೆಗೆ ಅವಕಾಶವಿಲ್ಲ ಎಂಬುದನ್ನು ಭಾರತ ಪದೇ ಪದೇ ಪುನರುಚ್ಛಿಸಿದೆ.

ಆದಾಗ್ಯೂ, ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು, ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ಜವಾಬ್ದಾರಿ ವಹಿಸಲು ಸಿದ್ಧ ಎಂದು ಹೇಳಿರುವುದು ಇದೀಗ ಜಾಗತಿಕವಾಗಿ ಗಮನ ಸೆಳೆದಿದೆ.

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಮಧ್ಯಸ್ಥಿಕೆ ಮಾತುಕತೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಪ್ರಧಾನ ಮಂತ್ರಿಗಳು, ವಿದೇಶಾಂಗ ಸಚಿವರು, ಸೇನಾ ಮುಖ್ಯಸ್ಥರು ಈ ಮಾತುಕತೆಯಲ್ಲಿ ಭಾಗವಹಿಸಿದ್ದರು. ಮೇ 12(ಸೋಮವಾರ) ಉಭಯ ದೇಶಗಳ ಡಿಜಿಎಂಓ ನಡುವೆ ಮಹತ್ವದ ಸಭೆ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನದ ನಾಯಕತ್ವವನ್ನು ಹೊಗಳಿರುವ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ಪ್ರಬಲ ನಾಯಕತ್ವವು ಈಗಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದೆ. ಯುದ್ಧವನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ಇದರಿಂದ ಅನೇಕ ಜನರ ಜೀವ ಉಳಿದಿದೆ. ನಿಮ್ಮ ಈ ಧೈರ್ಯಶಾಲಿ ನಿರ್ಧಾರದಿಂದ ನಿಮ ಕೀರ್ತಿ ಹೆಚ್ಚಾಗಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಅಮೆರಿಕ ಸಹಾಯದಿಂದ ಈ ಐತಿಹಾಸಿಕ ನಿರ್ಧಾರಕ್ಕೆ ಬರಲು ಸಾಧ್ಯವಾಯಿತು ಎಂಬುದು ಡೊನಾಲ್ಡ್ ಟ್ರಂಪ್ ಅವರ ವಾದ. ಇಷ್ಟೇ ಅಲ್ಲದೇ ಭಾರತ ಮತ್ತು ಪಾಕಿಸ್ತಾನದ ಜೊತೆ ವ್ಯಾಪಾರ ಸಂಬಂಧ ವೃದ್ಧಿಸಲು ಬಯಸುವುದಾಗಿ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ. ಅಲ್ಲದೇ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವೇ ಎಂಬುದನ್ನು ನೋಡೋಣ ಎಂದಿರು ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಾಯಕತ್ವಕ್ಕೆ ದೇವರು ಒಳ್ಳೆಯದು ಮಾಡಲಿ ಎಂದು ಆಶಿಸಿದ್ದಾರೆ.

ಒಟ್ಟಿನಲ್ಲಿ ಕಾಶ್ಮೀರ ವಿವಾದದ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಧಾನಕಾರನ ಪಾತ್ರವಹಿಸಲು ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದಾರೆ. ಆದರೆ ಟ್ರಂಪ್ ಆಫರ್‍ನ್ನು ಪಾಕಿಸ್ತಾನ ಒಪ್ಪಿದರೂ, ಭಾರತ ಮಾತ್ರ ಖಂಡಿತ ಒಪ್ಪುವುದಿಲ್ಲ ಎಂಬುದು ಖಚಿತ.

ಕದನ ವಿರಾಮ ಘೋಷಿಸಿರುವ ಭಾರತ ಪಾಕ್ ಎರಡೂ ದೇಶಕ್ಕೆ ಶುಭಾಶಯ ಕೋರಿದ ಟ್ರಂಪ್, 1000 ವರ್ಷ ಹಳೆಯ ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮಧ್ಯಸ್ಥಿತಿ ವಹಿಸುತ್ತೇನೆ ಬೇಕಾದ್ರೆ ಎಂದಿರುವ ಟ್ರಂಪ್‍ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾವಿರ ವರ್ಷ ಹಳೆಯ ಸಮಸ್ಯೆ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಬುದ್ಧಿವಾದ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

5 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

24 mins ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

2 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

3 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

15 hours ago