ದೇಶ- ವಿದೇಶ

ಬಲಿಷ್ಟ ರಾಷ್ಟ್ರ ಭಾರತದೊಂದಿಗೆ ಸಂಬಂಧವನ್ನು ಹದಗೆಡಿಸಬೇಡಿ: ಡೊನಾಲ್ಡ್‌ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

ವಾಷಿಂಗ್ಟನ್: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‍ಗೆ ಸಲಹೆ ನೀಡಿದ್ದಾರೆ.‌

ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರ ಪ್ರಸ್ತಾಪಗಳು ನಿರ್ಣಾಯಕ ಸಂದರ್ಭದಲ್ಲಿ ಭಾರತ-ಅಮೆರಿಕದ ಸಂಬಂಧಗಳನ್ನು ಹದಗೆಡಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ನಿಕ್ಕಿ, ಟ್ರಂಪ್ ಆಡಳಿತವು ದ್ವಿಮುಖ ನೀತಿ ಅಳವಡಿಸಿಕೊಂಡಿದೆ. ಚೀನಾದಂತಹ ಶತ್ರು‌ ರಾಷ್ಟ್ರಕ್ಕೆ ವ್ಯಾಪಾರಕ್ಕಾಗಿ ಅಮೆರಿಕ 90 ದಿನಗಳ ಸುಂಕ ವಿನಾಯ್ತಿ ನೀಡಿದೆ. ಆದರೆ ಭಾರತದ ಮೇಲೆ ಕಠಿಣ ನಿರ್ಧಾರಕ್ಕೆ ಮುಂದಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಬಾರದು ಎಂದು ಟ್ರಂಪ್ ಹೇಳುತ್ತಾರೆ. ಆದರೆ ರಷ್ಯಾ ಮತ್ತು ಇರಾನ್‍ನ ಅತಿದೊಡ್ಡ ತೈಲ ಖರೀದಿದಾರ ಚೀನಾಗೆ 90 ದಿನಗಳ ಸುಂಕ ವಿನಾಯ್ತಿ ಕೊಡುತ್ತಾರೆ. ಇದು ಒಳ್ಳೆಯದಲ್ಲ. ಚೀನಾದಂಥ ಶತ್ರು ರಾಷ್ಟ್ರಕ್ಕೆ ರಿಯಾಯತಿ ನೀಡಬೇಡಿ. ಹಾಗೆಯೇ ಭಾರತದಂತಹ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧವನ್ನು ಹದಗೆಡಿಸಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

2 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

2 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

2 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

2 hours ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

2 hours ago