ದೇಶ- ವಿದೇಶ

ಬಲಿಷ್ಟ ರಾಷ್ಟ್ರ ಭಾರತದೊಂದಿಗೆ ಸಂಬಂಧವನ್ನು ಹದಗೆಡಿಸಬೇಡಿ: ಡೊನಾಲ್ಡ್‌ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

ವಾಷಿಂಗ್ಟನ್: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‍ಗೆ ಸಲಹೆ ನೀಡಿದ್ದಾರೆ.‌

ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರ ಪ್ರಸ್ತಾಪಗಳು ನಿರ್ಣಾಯಕ ಸಂದರ್ಭದಲ್ಲಿ ಭಾರತ-ಅಮೆರಿಕದ ಸಂಬಂಧಗಳನ್ನು ಹದಗೆಡಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ನಿಕ್ಕಿ, ಟ್ರಂಪ್ ಆಡಳಿತವು ದ್ವಿಮುಖ ನೀತಿ ಅಳವಡಿಸಿಕೊಂಡಿದೆ. ಚೀನಾದಂತಹ ಶತ್ರು‌ ರಾಷ್ಟ್ರಕ್ಕೆ ವ್ಯಾಪಾರಕ್ಕಾಗಿ ಅಮೆರಿಕ 90 ದಿನಗಳ ಸುಂಕ ವಿನಾಯ್ತಿ ನೀಡಿದೆ. ಆದರೆ ಭಾರತದ ಮೇಲೆ ಕಠಿಣ ನಿರ್ಧಾರಕ್ಕೆ ಮುಂದಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಬಾರದು ಎಂದು ಟ್ರಂಪ್ ಹೇಳುತ್ತಾರೆ. ಆದರೆ ರಷ್ಯಾ ಮತ್ತು ಇರಾನ್‍ನ ಅತಿದೊಡ್ಡ ತೈಲ ಖರೀದಿದಾರ ಚೀನಾಗೆ 90 ದಿನಗಳ ಸುಂಕ ವಿನಾಯ್ತಿ ಕೊಡುತ್ತಾರೆ. ಇದು ಒಳ್ಳೆಯದಲ್ಲ. ಚೀನಾದಂಥ ಶತ್ರು ರಾಷ್ಟ್ರಕ್ಕೆ ರಿಯಾಯತಿ ನೀಡಬೇಡಿ. ಹಾಗೆಯೇ ಭಾರತದಂತಹ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧವನ್ನು ಹದಗೆಡಿಸಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

14 mins ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

16 mins ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

29 mins ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

36 mins ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

2 hours ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

2 hours ago