ದೇಶ- ವಿದೇಶ

ಬಲಿಷ್ಟ ರಾಷ್ಟ್ರ ಭಾರತದೊಂದಿಗೆ ಸಂಬಂಧವನ್ನು ಹದಗೆಡಿಸಬೇಡಿ: ಡೊನಾಲ್ಡ್‌ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

ವಾಷಿಂಗ್ಟನ್: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‍ಗೆ ಸಲಹೆ ನೀಡಿದ್ದಾರೆ.‌

ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರ ಪ್ರಸ್ತಾಪಗಳು ನಿರ್ಣಾಯಕ ಸಂದರ್ಭದಲ್ಲಿ ಭಾರತ-ಅಮೆರಿಕದ ಸಂಬಂಧಗಳನ್ನು ಹದಗೆಡಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ನಿಕ್ಕಿ, ಟ್ರಂಪ್ ಆಡಳಿತವು ದ್ವಿಮುಖ ನೀತಿ ಅಳವಡಿಸಿಕೊಂಡಿದೆ. ಚೀನಾದಂತಹ ಶತ್ರು‌ ರಾಷ್ಟ್ರಕ್ಕೆ ವ್ಯಾಪಾರಕ್ಕಾಗಿ ಅಮೆರಿಕ 90 ದಿನಗಳ ಸುಂಕ ವಿನಾಯ್ತಿ ನೀಡಿದೆ. ಆದರೆ ಭಾರತದ ಮೇಲೆ ಕಠಿಣ ನಿರ್ಧಾರಕ್ಕೆ ಮುಂದಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಬಾರದು ಎಂದು ಟ್ರಂಪ್ ಹೇಳುತ್ತಾರೆ. ಆದರೆ ರಷ್ಯಾ ಮತ್ತು ಇರಾನ್‍ನ ಅತಿದೊಡ್ಡ ತೈಲ ಖರೀದಿದಾರ ಚೀನಾಗೆ 90 ದಿನಗಳ ಸುಂಕ ವಿನಾಯ್ತಿ ಕೊಡುತ್ತಾರೆ. ಇದು ಒಳ್ಳೆಯದಲ್ಲ. ಚೀನಾದಂಥ ಶತ್ರು ರಾಷ್ಟ್ರಕ್ಕೆ ರಿಯಾಯತಿ ನೀಡಬೇಡಿ. ಹಾಗೆಯೇ ಭಾರತದಂತಹ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧವನ್ನು ಹದಗೆಡಿಸಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago