ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಸಂಸದರಿಗೆ ಮಹತ್ವದ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ತಪ್ಪು ದಾರಿಗೆ ಹೋಗುವುದು ಸುಲಭ. ಆದರೆ ಮತ್ತೆ ಸರಿಯಾದ ದಾರಿಗೆ ಮರಳುವುದು ತುಂಬಾ ಕಷ್ಟ. ಅವರನ್ನು ಸರಿಯಾದ ಮಾರ್ಗಕ್ಕೆ ಕರೆತರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಯುವಜನತೆಯನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಯುವಕರನ್ನು ಪ್ರಚೋದಿಸುವ ಬದಲು ಅವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಸಂಸದರಿಗೆ ಸಲಹೆ ನೀಡಿದರು.




