ದೇಶ- ವಿದೇಶ

ಪ್ರಾಥಮಿಕ ವರದಿ ಕುರಿತು ಆತುರದ ನಿರ್ಧಾರ ಬೇಡ: ನಾಗರಿಕ ವಿಮಾನಯಾನ ಸಚಿವರ ಮನವಿ

ವಿಶಾಖಪಟ್ಟಣ: ಗುಜರಾತ್‍ನ ಅಹಮಾದಾಬಾದ್‍ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣ ಸಂಬಂಧ ಪ್ರಾಥಮಿಕ ವರದಿ ಕುರಿತು ಆತುರದ ತೀರ್ಮಾನಗಳಿಗೆ ಬರಬೇಡಿ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ಮಾತನಾಡಿದ ಅವರು, ನಾವು ಪೈಲಟ್‍ಗಳ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಆದ್ದರಿಂದ ಈ ಹಂತದಲ್ಲಿ ಯಾವುದೇ ತೀರ್ಮಾನಗಳಿಗೆ ಧಾವಿಸಬೇಡಿ ಮತ್ತು ಅಂತಿಮ ವರದಿಗಾಗಿ ಕಾಯೋಣ ಎಂದು ಮನವಿ ಮಾಡಿದರು.

ಕಳೆದ ತಿಂಗಳು ಅಹಮದಾಬಾದ್-ಲಂಡನ್ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ನೀಡಿದ ವರದಿಯು ಪ್ರಾಥಮಿಕ ಸಂಶೋಧನೆಗಳನ್ನು ಆಧರಿಸಿದೆ ಮತ್ತು ಅಂತಿಮ ವರದಿ ಬಿಡುಗಡೆಯಾಗುವವರೆಗೆ ಯಾರೂ ತೀರ್ಮಾನಗಳಿಗೆ ಬರಬಾರದು ಎಂದು ಕೋರಿದ್ದಾರೆ.

ಇದರ ಬಗ್ಗೆ ನಾವು ಯಾವುದೇ ತೀರ್ಮಾನಗಳಿಗೆ ಧಾವಿಸಬಾರದು ಎಂದು ನಾನು ಭಾವಿಸುತ್ತೇನೆ. ಇಡೀ ವಿಶ್ವದಲ್ಲೇ ಅತ್ಯಂತ ಅದ್ಭುತವಾದ ಪೈಲಟ್‍ಗಳು ಮತ್ತು ಸಿಬ್ಬಂದಿ ನಮಲ್ಲಿದ್ದಾರೆ ಎಂದು ನಾನು ನಂಬುತ್ತೇನೆ. ದೇಶದ ಪೈಲಟ್‍ಗಳು ಮತ್ತು ಸಿಬ್ಬಂದಿ ಮಾಡುತ್ತಿರುವ ಎಲ್ಲಾ ಪ್ರಯತ್ನಗಳನ್ನು ನಾನು ಪ್ರಶಂಸಿಸಲೇಬೇಕು, ಅವರು ನಾಗರಿಕ ವಿಮಾನಯಾನದ ಬೆನ್ನೆಲುಬು. ಅವರು ನಾಗರಿಕ ವಿಮಾನಯಾನದ ಪ್ರಾಥಮಿಕ ಸಂಪನ್ಮೂಲ. ನಾವು ಪೈಲಟ್‍ಗಳ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಆದ್ದರಿಂದ ಈ ಹಂತದಲ್ಲಿ ಯಾವುದೇ ತೀರ್ಮಾನಗಳಿಗೆ ಧಾವಿಸಬೇಡಿ ಮತ್ತು ಅಂತಿಮ ವರದಿಗಾಗಿ ಕಾಯೋಣ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

1 hour ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

1 hour ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

1 hour ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

2 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

2 hours ago