ದೇಶ- ವಿದೇಶ

ಪ್ರಾಥಮಿಕ ವರದಿ ಕುರಿತು ಆತುರದ ನಿರ್ಧಾರ ಬೇಡ: ನಾಗರಿಕ ವಿಮಾನಯಾನ ಸಚಿವರ ಮನವಿ

ವಿಶಾಖಪಟ್ಟಣ: ಗುಜರಾತ್‍ನ ಅಹಮಾದಾಬಾದ್‍ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣ ಸಂಬಂಧ ಪ್ರಾಥಮಿಕ ವರದಿ ಕುರಿತು ಆತುರದ ತೀರ್ಮಾನಗಳಿಗೆ ಬರಬೇಡಿ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ಮಾತನಾಡಿದ ಅವರು, ನಾವು ಪೈಲಟ್‍ಗಳ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಆದ್ದರಿಂದ ಈ ಹಂತದಲ್ಲಿ ಯಾವುದೇ ತೀರ್ಮಾನಗಳಿಗೆ ಧಾವಿಸಬೇಡಿ ಮತ್ತು ಅಂತಿಮ ವರದಿಗಾಗಿ ಕಾಯೋಣ ಎಂದು ಮನವಿ ಮಾಡಿದರು.

ಕಳೆದ ತಿಂಗಳು ಅಹಮದಾಬಾದ್-ಲಂಡನ್ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ನೀಡಿದ ವರದಿಯು ಪ್ರಾಥಮಿಕ ಸಂಶೋಧನೆಗಳನ್ನು ಆಧರಿಸಿದೆ ಮತ್ತು ಅಂತಿಮ ವರದಿ ಬಿಡುಗಡೆಯಾಗುವವರೆಗೆ ಯಾರೂ ತೀರ್ಮಾನಗಳಿಗೆ ಬರಬಾರದು ಎಂದು ಕೋರಿದ್ದಾರೆ.

ಇದರ ಬಗ್ಗೆ ನಾವು ಯಾವುದೇ ತೀರ್ಮಾನಗಳಿಗೆ ಧಾವಿಸಬಾರದು ಎಂದು ನಾನು ಭಾವಿಸುತ್ತೇನೆ. ಇಡೀ ವಿಶ್ವದಲ್ಲೇ ಅತ್ಯಂತ ಅದ್ಭುತವಾದ ಪೈಲಟ್‍ಗಳು ಮತ್ತು ಸಿಬ್ಬಂದಿ ನಮಲ್ಲಿದ್ದಾರೆ ಎಂದು ನಾನು ನಂಬುತ್ತೇನೆ. ದೇಶದ ಪೈಲಟ್‍ಗಳು ಮತ್ತು ಸಿಬ್ಬಂದಿ ಮಾಡುತ್ತಿರುವ ಎಲ್ಲಾ ಪ್ರಯತ್ನಗಳನ್ನು ನಾನು ಪ್ರಶಂಸಿಸಲೇಬೇಕು, ಅವರು ನಾಗರಿಕ ವಿಮಾನಯಾನದ ಬೆನ್ನೆಲುಬು. ಅವರು ನಾಗರಿಕ ವಿಮಾನಯಾನದ ಪ್ರಾಥಮಿಕ ಸಂಪನ್ಮೂಲ. ನಾವು ಪೈಲಟ್‍ಗಳ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಆದ್ದರಿಂದ ಈ ಹಂತದಲ್ಲಿ ಯಾವುದೇ ತೀರ್ಮಾನಗಳಿಗೆ ಧಾವಿಸಬೇಡಿ ಮತ್ತು ಅಂತಿಮ ವರದಿಗಾಗಿ ಕಾಯೋಣ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

16 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

9 hours ago