dowryb
ಲಕ್ನೋ : ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿ ಹೀನಾಯ ಕೃತ್ಯವೆಸಗಿದ್ದಾರೆ.
ನೊಯ್ಡಾದಲ್ಲಿ ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಬೆಂಕಿ ಹಚ್ಚಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಇಂತಹದೊಂದು ಭಯಾನಕ ವರದಕ್ಷಿಣೆ ಕ್ರೌರ್ಯ ವರದಿಯಾಗಿದೆ.
ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ. ಗುಲ್ಫಿಜಾ ಹತ್ಯೆಯಾದ ಮಹಿಳೆಯಾಗಿದ್ದಾಳೆ.
ಆಕೆ ಒಂದು ವರ್ಷದ ಹಿಂದೆ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲಖೇಡ ಗ್ರಾಮದ ಪರ್ವೇಜ್ ಎಂಬವನನ್ನು ಮದುವೆ ಆಗಿದ್ದಳು. ಆಕೆಯ ಅತ್ತೆ-ಮಾವ 10 ಲಕ್ಷ ರೂ. ನಗದು ಮತ್ತು ಕಾರನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆ.11 ರಂದು ಗಲ್ಫಿಜಾಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾರೆ. ಆಕೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. 17 ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ತಂದೆ ಫರ್ಕಾನ್ ನೀಡಿದ ದೂರಿನ ಮೇರೆಗೆ, ಪರ್ವೇಜ್, ಅಸಿಮ್, ಗುಲಿಸ್ತಾ, ಮೋನಿಶ್, ಸೈಫ್, ಡಾ. ಭೂರಾ ಮತ್ತು ಬಬ್ಬು ಎಂಬ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ, ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…