ದೇಶ- ವಿದೇಶ

ವರದಕ್ಷಿಣೆ ಕಿರುಕುಳ : ಸೊಸೆಗೆ ಆಸಿಡ್‌ ಕುಡಿಸಿ ಹತ್ಯೆಗೈದ ಕುಟುಂಬ

ಲಕ್ನೋ : ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿ ಹೀನಾಯ ಕೃತ್ಯವೆಸಗಿದ್ದಾರೆ.

ನೊಯ್ಡಾದಲ್ಲಿ ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಬೆಂಕಿ ಹಚ್ಚಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಇಂತಹದೊಂದು ಭಯಾನಕ ವರದಕ್ಷಿಣೆ ಕ್ರೌರ್ಯ ವರದಿಯಾಗಿದೆ.

ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ. ಗುಲ್ಫಿಜಾ ಹತ್ಯೆಯಾದ ಮಹಿಳೆಯಾಗಿದ್ದಾಳೆ.

ಆಕೆ ಒಂದು ವರ್ಷದ ಹಿಂದೆ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲಖೇಡ ಗ್ರಾಮದ ಪರ್ವೇಜ್ ಎಂಬವನನ್ನು ಮದುವೆ ಆಗಿದ್ದಳು. ಆಕೆಯ ಅತ್ತೆ-ಮಾವ 10 ಲಕ್ಷ ರೂ. ನಗದು ಮತ್ತು ಕಾರನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆ.11 ರಂದು ಗಲ್ಫಿಜಾಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾರೆ. ಆಕೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. 17 ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ತಂದೆ ಫರ್ಕಾನ್ ನೀಡಿದ ದೂರಿನ ಮೇರೆಗೆ, ಪರ್ವೇಜ್, ಅಸಿಮ್, ಗುಲಿಸ್ತಾ, ಮೋನಿಶ್, ಸೈಫ್, ಡಾ. ಭೂರಾ ಮತ್ತು ಬಬ್ಬು ಎಂಬ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ, ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago