dowryb
ಲಕ್ನೋ : ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿ ಹೀನಾಯ ಕೃತ್ಯವೆಸಗಿದ್ದಾರೆ.
ನೊಯ್ಡಾದಲ್ಲಿ ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಬೆಂಕಿ ಹಚ್ಚಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಇಂತಹದೊಂದು ಭಯಾನಕ ವರದಕ್ಷಿಣೆ ಕ್ರೌರ್ಯ ವರದಿಯಾಗಿದೆ.
ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ. ಗುಲ್ಫಿಜಾ ಹತ್ಯೆಯಾದ ಮಹಿಳೆಯಾಗಿದ್ದಾಳೆ.
ಆಕೆ ಒಂದು ವರ್ಷದ ಹಿಂದೆ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲಖೇಡ ಗ್ರಾಮದ ಪರ್ವೇಜ್ ಎಂಬವನನ್ನು ಮದುವೆ ಆಗಿದ್ದಳು. ಆಕೆಯ ಅತ್ತೆ-ಮಾವ 10 ಲಕ್ಷ ರೂ. ನಗದು ಮತ್ತು ಕಾರನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆ.11 ರಂದು ಗಲ್ಫಿಜಾಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾರೆ. ಆಕೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. 17 ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ತಂದೆ ಫರ್ಕಾನ್ ನೀಡಿದ ದೂರಿನ ಮೇರೆಗೆ, ಪರ್ವೇಜ್, ಅಸಿಮ್, ಗುಲಿಸ್ತಾ, ಮೋನಿಶ್, ಸೈಫ್, ಡಾ. ಭೂರಾ ಮತ್ತು ಬಬ್ಬು ಎಂಬ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ, ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…