ದೇಶ- ವಿದೇಶ

ದೇಶದ ಅಭಿವೃದ್ಧಿಗಾಗಿ ಬಡವರು, ಮಹಿಳೆಯರು, ಯುವಕರಿಗೆ ಸಾಕಷ್ಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಬದ್ಧ: ದ್ರೌಪದಿ ಮುರ್ಮು

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ದೇಶದ ಅಭಿವೃದ್ಧಿಗಾಗಿ ಬಡವರು, ಮಹಿಳೆಯರು ಹಾಗೂ ಯುವಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ಮಾಡಲು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದಿನಿಂದ(ಜನವರಿ.31) ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಜಂಟಿ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಬಡವರ ಅಭಿವೃದ್ಧಿಗೆ ಬದ್ಧವಾಗಿದ್ದು ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗಕ್ಕೆ ಒತ್ತು ನೀಡುತ್ತಿದೆ ಎಂದು ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.

ಕೇಂದ್ರ ಸರ್ಕಾರವೂ ಪಿಎಂ ಕಿಸಾನ್‌ ಯೋಜನೆಯಡಿ ರೈತರ ಖಾತೆಗೆ ಹಣ ಜಮೆ ಮಾಡುತ್ತಿದೆ. ಸಾರ್ವಜನಿಕರಿಗೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ ನೀಡುತ್ತಿದೆ. ಅಲ್ಲದೇ ಆಯುಷ್ಮಾನ್‌ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಬಡತನದಿಂದ ಮುಕ್ತವಾಗಲು ಯೋಜನೆ ಹಾಗೂ 70 ವರ್ಷ ದಾಟಿದವರಿಗೆ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುತ್ತಿದೆ. ಈ ಬಾರಿಯ ಬಜೆಟ್ ನಲ್ಲಿ ಕೃಷಿ ಮಹಿಳೆಯರಿಗೆ ಒತ್ತು ನೀಡಲಾಗುತ್ತದೆ. ಸರ್ಕಾರಿ ನೌಕರರಿಗೆ 50% ಪಿಂಚಣಿ ಸಿಗಲಿದೆ. ಈ ಮೂಲಕ ದೇಶದ ಅಭಿವೃದ್ದಿಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

ನಮ್ಮ ದೇಶದ ಯುವಕರು ಇಂದು ಸ್ಟಾರ್ಟಾಪ್‌ನಿಂದ ದೇಶಕ್ಕೆ ಕೀರ್ತಿ ತರುತ್ತಿದ್ದು, ಕಳೆದ ದಶಕದಲ್ಲಿ ಮೇಕ್‌ ಇನ್‌ ಇಂಡಿಯಾ, ಸ್ಟಾರ್ಟ್‌ ಅಪ್‌ ಇಂಡಿಯಾ ಹಾಗೂ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಗಳ ಮೂಲಕ ಯುವಕರಿಗೆ ಅನೇಕ ಅವಕಾಶಗಳನ್ನು ಒದಗಿಸಲಾಗಿದೆ. ಅಲ್ಲದೇ ಇಂಟರ್‌ಶಿಪ್‌ ಯೋಜನೆಯ ಮೂಲಕ ಯುವಕರಿಗೆ ನೂತನ ಅನುಭವ ನೀಡಲಾಗುತ್ತಿದೆ. ಹೀಗಾಗಿ ದೇಶದಲ್ಲಿ ಲಕ್ಷಾಂತರ ಸ್ಟಾಟರ್ಪ್‌ಗಳು ಕೆಲಸ ಮಾಡಿತ್ತಿದ್ದು, ಎಐ ಹಾಗೂ ಡಿಜಿಟಲ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಭಾರತವೂ ಜಗತ್ತಿಗೆ ದಾರಿ ತೋರಿಸುತ್ತಿದೆ ಎಂದರು.

ಕೇಂದ್ರ ಸರ್ಕಾರ ಯುವಕರ ಶಿಕ್ಷಣಕ್ಕೆ ವಿಶೇಷ ಗಮನ ನೀಡಿದ್ದು, ವಿದ್ಯಾರ್ಥಿಗಳಿಗೆ ಆಧುನಿಕ ಪಠ್ಯಕ್ರಮವನ್ನು ಸಿದ್ಧಪಡಿಸುತ್ತಿದೆ. ಯುವಕರಿಗೆ ಹೊಸ ಉದ್ಯೋಗಾವಕಾಶ ಕಲ್ಪಿಸಿದ್ದು, ಉನ್ನತ ಕಂಪೆನಿಗಳಲ್ಲಿ ಇಂಟರ್‌ಶಿಪ್‌ ಮಾಡಲು ಅವಕಾಶಗಳನ್ನು ನೀಡಲಾಗುತ್ತಿದೆ. ಇನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ 70 ಸಾವಿರ ಕೋಟಿ ರೂ. ಹಾಗೂ ದೇಶವು ಅಟಲ್‌ಜೀ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ ಅವರ ಅಟಲ್‌ ಗ್ರಾಮ ಸಡಕ್‌ ಯೋಜನೆಯೂ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ತಿಳಿಸಿದರು.

ಇನ್ನೂ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಮಹಿಳೆಯರು ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಲಕ್ಪತಿ ದೀದಿಗಳ ಸಂಖ್ಯೆಯನ್ನು ನಿರಂತರವಾಗಿ ಅಧಿಕಗೊಳಿಸಲಾಗುತ್ತಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

44 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago