ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್ ಹಾರಾಟ ನಡೆಸಿದ್ದು, ದೇವಾಲಯದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಡ್ರೋನ್ ಹಾರಾಟ ನಡೆಸಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮುಂಜಾನೆ 4.10ರ ಸುಮಾರಿಗೆ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಇದು ಹಾರಾಡಿದೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಅವರು, ದೇವಸ್ಥಾನದ ಮೇಲೆ ಡ್ರೋನ್ ಹಾರಿಸುವುದು ಕಾನೂನು ಬಾಹಿರ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ವ್ಯಕ್ತಿಯನ್ನು ಪತ್ತೆ ಹಚ್ಚಿ, ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಿ ಎಸ್ಪಿ ಅವರು ವಿಶೇಷ ತಂಡಗಳನ್ನು ರಚಿಸಿ, ತನಿಖೆ ಪ್ರಾರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಘಟನೆ ಸಂಬಂಧ ಯಾರೂ ಒಬ್ಬ ವ್ಯಕ್ತಿ ವ್ಲಾಗರ್ ಡ್ರೋನನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ತನಿಖೆ ನಡೆಸಿ, ಅದರ ಹಿಂದಿನ ಉದ್ದೇಶ ತಿಳಿದುಕೊಳ್ಳಲು ವಿಶೇಷ ತಂಡ ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…