ದೇಶ- ವಿದೇಶ

ರಾಜ್ಯಸಭೆಗೆ ನಾಲ್ವರನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

ಸಂವಿಧಾನದ ವಿಧಿ 80(1)(ಎ)ಯಿಂದ ನೀಡಲಾದ ಅಧಿಕಾರಿಗಳ ಅಡಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ವರು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ ಉಳಿದಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ನಾಮನಿರ್ದೇಶನಗಳನ್ನು ಮಾಡಲಾಗಿದೆ. ಉಜ್ವಲ್‌ ದೇವರಾವ್‌ ನಿಕಮ್‌, ಸಿ ಸದಾನಂದ ಮಾಸ್ಟರ್‌, ಹರ್ಷವರ್ಧನ್‌ ಶ್ರಿಂಗ್ಲಾ, ಮೀನಾಕ್ಷಿ ಜೈನ್‌ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಉಜ್ವಲ್‌ ದೇವರಾಮ್‌ ನಿಕಮ್:‌ ಮುಂಬೈ ಭಯೋತ್ಪಾದಕ ದಾಳಿ ಸೇರಿದಂತೆ ಹಲವಾರು ಉನ್ನತ ಮಟ್ಟದ ಕ್ರಿಮಿನಲ್‌ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಹೆಸರುವಾಸಿಯಾದ ಪ್ರಸಿದ್ಧ ಪಬ್ಲಿಕ್‌ ಪ್ರಾಸಿಕ್ಯೂಟರ್‌.

ಸಿ.ಸದಾನಂದ ಮಾಸ್ಟರ್:‌ ದಶಕಗಳ ತಳಮಟ್ಟದ ಅನುಭವ ಹೊಂದಿರುವ ಕೇರಳದ ಗೌರವಾನ್ವಿತ ಸಾಮಾಜಿಕ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ.

ಹರ್ಷವರ್ಧನ್‌ ಶ್ರಿಂಗ್ಲಾ: ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು, ಈ ಹಿಂದೆ ಅಮೆರಿಕಾದಲ್ಲಿ ಭಾರತದ ರಾಯಭಾರಿಯಾಗಿ ನೇಮಕಗೊಂಡಿದ್ದರು.

ಮೀನಾಕ್ಷಿ ಜೈನ್:‌ ಇವರು ಇತಿಹಾಸಕಾರರು ಹಾಗೂ ಶಿಕ್ಷಣ ತಜ್ಞೆಯಾಗಿದ್ದು, ಭಾರತೀಯ ಇತಿಹಾಸ ಮತ್ತು ನಾಗರಿಕತೆಯ ಕುರಿತಾದ ತಮ್ಮ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ.

ಹಿಂದಿನ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದಾಗಿ ಖಾಲಿ ಸ್ಥಾನಗಳು ಬೀಳುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

2 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

13 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

32 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

38 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago