ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಸಂವಿಧಾನದ ವಿಧಿ 80(1)(ಎ)ಯಿಂದ ನೀಡಲಾದ ಅಧಿಕಾರಿಗಳ ಅಡಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ವರು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ.
ಈ ಹಿಂದೆ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ ಉಳಿದಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ನಾಮನಿರ್ದೇಶನಗಳನ್ನು ಮಾಡಲಾಗಿದೆ. ಉಜ್ವಲ್ ದೇವರಾವ್ ನಿಕಮ್, ಸಿ ಸದಾನಂದ ಮಾಸ್ಟರ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಉಜ್ವಲ್ ದೇವರಾಮ್ ನಿಕಮ್: ಮುಂಬೈ ಭಯೋತ್ಪಾದಕ ದಾಳಿ ಸೇರಿದಂತೆ ಹಲವಾರು ಉನ್ನತ ಮಟ್ಟದ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಹೆಸರುವಾಸಿಯಾದ ಪ್ರಸಿದ್ಧ ಪಬ್ಲಿಕ್ ಪ್ರಾಸಿಕ್ಯೂಟರ್.
ಸಿ.ಸದಾನಂದ ಮಾಸ್ಟರ್: ದಶಕಗಳ ತಳಮಟ್ಟದ ಅನುಭವ ಹೊಂದಿರುವ ಕೇರಳದ ಗೌರವಾನ್ವಿತ ಸಾಮಾಜಿಕ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ.
ಹರ್ಷವರ್ಧನ್ ಶ್ರಿಂಗ್ಲಾ: ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು, ಈ ಹಿಂದೆ ಅಮೆರಿಕಾದಲ್ಲಿ ಭಾರತದ ರಾಯಭಾರಿಯಾಗಿ ನೇಮಕಗೊಂಡಿದ್ದರು.
ಮೀನಾಕ್ಷಿ ಜೈನ್: ಇವರು ಇತಿಹಾಸಕಾರರು ಹಾಗೂ ಶಿಕ್ಷಣ ತಜ್ಞೆಯಾಗಿದ್ದು, ಭಾರತೀಯ ಇತಿಹಾಸ ಮತ್ತು ನಾಗರಿಕತೆಯ ಕುರಿತಾದ ತಮ್ಮ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ.
ಹಿಂದಿನ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದಾಗಿ ಖಾಲಿ ಸ್ಥಾನಗಳು ಬೀಳುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…