ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಚಿತ್ರರಂಗದ ಅನೇಕರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಮಲೆಯಾಳಂ ಸಿನಿಮಾ ಇಬ್ಬರು ನಿರ್ದೇಶಕರನ್ನು ಕೊಚ್ಚಿ ಪೊಲೀಸರು ಭಾನುವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಖಾಲೀದ್ ರೆಹಮಾನ್ ಹಾಗೂ ಆಶ್ರಫ್ ಹಮ್ಜಾ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಳಿಯಿದ್ದ ಹೈಬ್ರೀಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೌಪ್ಯ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಭಾನುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಿರ್ದೇಶಕರನ್ನು ಬಂಧಿಸಿದ್ದಾರೆ.
ಆಲಪ್ಪುಳ ಜಿಮ್ಖಾನಾ ಮತ್ತು ತಲ್ಲುಮಾಲಾದಂತಹ ಸಿನಿಮಾಗಳನ್ನು ನಿರ್ದೇಶಿಸಿದ ಮತ್ತು ಮಂಜುಮಲ್ ಬಾಯ್ಸ್ ಚಿತ್ರದಲ್ಲಿ ನಟಿಸಿದ್ದ ರೆಹಮಾನ್, ತಮಾಶಾ, ಭೀಮಂತೆ ವಾಝಿ ಮತ್ತು ಸುಲೈಖಾ ಮಂಜಿಲ್ ಚಿತ್ರದ ನಿರ್ದೇಶಕ ಹಮ್ಜಾ ಮನೆಗಳ ಮೇಲೆ ದಾಳಿ ನಡೆಸಿದಾಗ ಗಾಂಜಾ ಪತ್ತೆಯಾಗಿದ್ದು, ನಂತಹ ಇಬ್ಬರು ನಿರ್ದೇಶಕರು ಸೇರಿ ಹಲವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ, ಕೊಚ್ಚಿಯ ಗೋರ್ಸಿ ಬ್ರಿಡ್ಜ್ ಮೇಲೆ ದಾಳಿ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ರೆಹಮಾನ್ ಮತ್ತು ಹಮ್ಜಾ ನಿಯಮಿತ ಮಾದಕ ದ್ರವ್ಯ ಬಳಕೆದಾರರು ಎಂದು ಅಬಕಾರಿ ಇಲಾಖೆ ದೃಢಪಡಿಸಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…