ದೇಶ- ವಿದೇಶ

ಗಾಂಜಾ ಪ್ರಕರಣ ; ಮಲಯಾಳಂ ಇಬ್ಬರು ನಿರ್ದೇಶಕರ ಬಂಧನ

ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಚಿತ್ರರಂಗದ ಅನೇಕರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಮಲೆಯಾಳಂ ಸಿನಿಮಾ ಇಬ್ಬರು ನಿರ್ದೇಶಕರನ್ನು ಕೊಚ್ಚಿ ಪೊಲೀಸರು ಭಾನುವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಖಾಲೀದ್ ರೆಹಮಾನ್ ಹಾಗೂ ಆಶ್ರಫ್ ಹಮ್ಜಾ  ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಳಿಯಿದ್ದ ಹೈಬ್ರೀಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೌಪ್ಯ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಭಾನುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಿರ್ದೇಶಕರನ್ನು ಬಂಧಿಸಿದ್ದಾರೆ.

ಆಲಪ್ಪುಳ ಜಿಮ್ಖಾನಾ ಮತ್ತು ತಲ್ಲುಮಾಲಾದಂತಹ ಸಿನಿಮಾಗಳನ್ನು ನಿರ್ದೇಶಿಸಿದ ಮತ್ತು ಮಂಜುಮಲ್ ಬಾಯ್ಸ್ ಚಿತ್ರದಲ್ಲಿ ನಟಿಸಿದ್ದ ರೆಹಮಾನ್, ತಮಾಶಾ, ಭೀಮಂತೆ ವಾಝಿ ಮತ್ತು ಸುಲೈಖಾ ಮಂಜಿಲ್ ಚಿತ್ರದ ನಿರ್ದೇಶಕ ಹಮ್ಜಾ ಮನೆಗಳ ಮೇಲೆ ದಾಳಿ ನಡೆಸಿದಾಗ ಗಾಂಜಾ ಪತ್ತೆಯಾಗಿದ್ದು, ನಂತಹ ಇಬ್ಬರು ನಿರ್ದೇಶಕರು ಸೇರಿ ಹಲವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ, ಕೊಚ್ಚಿಯ ಗೋರ್ಸಿ ಬ್ರಿಡ್ಜ್ ಮೇಲೆ ದಾಳಿ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ರೆಹಮಾನ್ ಮತ್ತು ಹಮ್ಜಾ ನಿಯಮಿತ ಮಾದಕ ದ್ರವ್ಯ ಬಳಕೆದಾರರು ಎಂದು ಅಬಕಾರಿ ಇಲಾಖೆ ದೃಢಪಡಿಸಿದೆ.

ಆಂದೋಲನ ಡೆಸ್ಕ್

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

38 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

2 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

4 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago