ದೇಶ- ವಿದೇಶ

ಜನಸ್ಪಂದನಾ ಕಾರ್ಯಕ್ರಮದ ವೇಳೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ: ವ್ಯಕ್ತಿಯ ಬಂಧನ

ನವದೆಹಲಿ: ಜನಸ್ಪಂದನಾ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ ಬಳಿ ಹಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದನು. ಈ ವೇಳೆ ನೋಡನೋಡುತ್ತಿದ್ದಂತೆ ರೇಖಾ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ.

ಕೂಡಲೇ ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣ ಇನೂ ತಿಳಿದುಬಂದಿಲ್ಲ.

ಇನ್ನು ದೆಹಲಿ ಸಿಎಂ ರೇಖಾ ಗುಪ್ತಾ ಅವರು ಮೇಲಿನ ದಾಳಿಯನ್ನು ಮಾಜಿ ಸಿಎಂ ಅತಿಶಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ. ಸಿಎಂ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

51 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

55 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

60 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

1 hour ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

1 hour ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

1 hour ago