ದೇಶ- ವಿದೇಶ

ಜಪಾನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಟೋಕಿಯೊ: ಸೋಮವಾರ ಜಪಾನ್ ಕೇಂದ್ರ ಭಾಗದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಟೋಕಿಯೊ ಸೇರಿದಂತೆ ಇತರೆ ನಗರಗಳಲ್ಲಿ ಕಂಪನದ ಅನುಭವವಾಗಿದೆ.
ಜಪಾನ್ ಕಾಲಮಾನ ಸಂಜೆ 5 ಗಂಟೆ ಸುಮಾರಿಗೆ ಆಗ್ನೇಯ ಭಾಗದ ಟೋಬಾದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿನ ಹವಾಮಾನ ಸಂಸ್ಥೆ ತಿಳಿಸಿದೆ. ಸಾರ್ವಜನಿಕ ಸುದ್ದಿವಾಹಿನಿ ಎನ್‌ಎಚ್‌ಕೆ ಪ್ರಕಾರ, ಫುಕುಶಿಮಾ ಪರಮಾಣು ಸ್ಥಾವರಗಳಲ್ಲಿ ಯಾವುದೇ ಹಾನಿ ಅಥವಾ ಗಾಯಗಳ ವರದಿ ಆಗಿಲ್ಲ.ಅಮೆರಿಕದ ಭೌಗೋಳಿಕ ಸಮೀಕ್ಷಾ ಸಂಸ್ಥೆಯು ಸಹ 6.1 ತೀವ್ರತೆಯ ಭೂಕಂಪ  ಸಂಭವಿಸಿರುವುದನ್ನು ಖಚಿತಪಡಿಸಿದೆ. ಭೂಕಂಪನದ ಕೇಂದ್ರದಿಂದ ನೂರಾರು ಕಿ.ಮೀ ದೂರದಲ್ಲಿದ್ದರೂ ಸಹ ಫುಕುಶಿಮಾ ಮತ್ತು ಇಬರಾಕಿ ಪ್ರಾಂತ್ಯಗಳು, ಉತ್ತರ ಟೋಕಿಯೊದಲ್ಲಿ ಭಾರಿ ಪ್ರಮಾಣದ ಅಲುಗಾಡಿದ ಅನುಭವವಾಗಿದೆ. ಆದರೆ, ಈವರೆಗೆ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ಭೂಕಂಪದ ನಂತರ ಶಿಂಕನ್‌ಸೆನ್ ಬುಲೆಟ್ ರೈಲುಗಳು ಮತ್ತು ಟೋಕಿಯೊ ಮೆಟ್ರೋವನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿ, ನಂತರ ಪುನರಾರಂಭಿಸಲಾಗಿದೆ.

andolanait

Recent Posts

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

34 mins ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

2 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

2 hours ago

ಮೈಸೂರು | ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಸಾವು

ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್‌ ಬಳಿ ನಡೆದಿದೆ.ಜ…

2 hours ago

ರಂಜಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : ಕಾಡಿನಲ್ಲಿ ಆರೋಪಿ ಶವ ಪತ್ತೆ!

ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್‌ ಟ್ವೀಸ್ಟ್‌ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್‌…

3 hours ago

ಸಮುದಾಯದ ಸಂಘಟನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

3 hours ago