ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್ನಲ್ಲೂ ಕಂಪನದ ಅನುಭವವಾಗಿದೆ.
ಈ ಕುರಿತು ಕೋಲ್ಕತ್ತಾದ ಜನ ಭೂಕಂಪನ ಅನುಭವವನ್ನು ಹೇಳಿಕೊಂಡಿದ್ದಾರೆ.
ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.
ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್ಝಡ್ ಭೂವಿಜ್ಞಾನ ಕೇಂದ್ರ ಹೇಳಿದೆ.
ಭೂಕಂಪನದ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾನ್ನಲ್ಲೂ ಜೊತೆಗೆ ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ. ಈ ವೇಳೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.
ಘಟನೆ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನೆರವಿಗೆ ಸಿದ್ಧ ಎಂದು ಅಭಯ ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…