ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್ನಲ್ಲೂ ಕಂಪನದ ಅನುಭವವಾಗಿದೆ.
ಈ ಕುರಿತು ಕೋಲ್ಕತ್ತಾದ ಜನ ಭೂಕಂಪನ ಅನುಭವವನ್ನು ಹೇಳಿಕೊಂಡಿದ್ದಾರೆ.
ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.
ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್ಝಡ್ ಭೂವಿಜ್ಞಾನ ಕೇಂದ್ರ ಹೇಳಿದೆ.
ಭೂಕಂಪನದ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾನ್ನಲ್ಲೂ ಜೊತೆಗೆ ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ. ಈ ವೇಳೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.
ಘಟನೆ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನೆರವಿಗೆ ಸಿದ್ಧ ಎಂದು ಅಭಯ ನೀಡಿದ್ದಾರೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…