ದೇಶ- ವಿದೇಶ

ಬ್ಯಾಂಕಾಕ್‌ ಭೂಕಂಪ ; ಕೋಲ್ಕತ್ತ, ಇಂಫಾಲ್‌ನಲ್ಲೂ ಕಂಪಿಸಿದ ಭೂಮಿ

ಬ್ಯಾಂಕಾಕ್‌ : ಮ್ಯಾನ್ಮಾರ್‌ ಮತ್ತು ಥೈಯ್ಲಾಂಡ್‌ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್‌ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಕಂಪನದ ಅನುಭವವಾಗಿದೆ.

ಈ ಕುರಿತು ಕೋಲ್ಕತ್ತಾದ ಜನ ಭೂಕಂಪನ ಅನುಭವವನ್ನು ಹೇಳಿಕೊಂಡಿದ್ದಾರೆ.

ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.

ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್‌ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್‌ಝಡ್‌ ಭೂವಿಜ್ಞಾನ ಕೇಂದ್ರ ಹೇಳಿದೆ.

ಭೂಕಂಪನದ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಜೊತೆಗೆ ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ. ಈ ವೇಳೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.

ಘಟನೆ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ ನೆರವಿಗೆ ಸಿದ್ಧ ಎಂದು ಅಭಯ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

7 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

13 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

13 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

13 hours ago