ದೇಶ- ವಿದೇಶ

ಬ್ಯಾಂಕಾಕ್‌ ಭೂಕಂಪ ; ಕೋಲ್ಕತ್ತ, ಇಂಫಾಲ್‌ನಲ್ಲೂ ಕಂಪಿಸಿದ ಭೂಮಿ

ಬ್ಯಾಂಕಾಕ್‌ : ಮ್ಯಾನ್ಮಾರ್‌ ಮತ್ತು ಥೈಯ್ಲಾಂಡ್‌ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್‌ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಕಂಪನದ ಅನುಭವವಾಗಿದೆ.

ಈ ಕುರಿತು ಕೋಲ್ಕತ್ತಾದ ಜನ ಭೂಕಂಪನ ಅನುಭವವನ್ನು ಹೇಳಿಕೊಂಡಿದ್ದಾರೆ.

ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.

ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್‌ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್‌ಝಡ್‌ ಭೂವಿಜ್ಞಾನ ಕೇಂದ್ರ ಹೇಳಿದೆ.

ಭೂಕಂಪನದ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಜೊತೆಗೆ ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ. ಈ ವೇಳೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.

ಘಟನೆ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ ನೆರವಿಗೆ ಸಿದ್ಧ ಎಂದು ಅಭಯ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago