erth quick
ಕಾಬುಲ್: ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದಿಂದ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮಗೊಂಡಿವೆ. ಇನ್ನೂ ಹಲವಾರು ಹಳ್ಳಿಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೇ ಗ್ರಾಮದಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಫ್ಘಾನ್ ಆರೋಗ್ಯ ಸಚಿವಾಲಯ ವಕ್ತಾರ ಶರಫತ್ ಜಮಾನ್ ತಿಳಿಸಿದ್ದಾರೆ.
ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಬೇರೆ ದೇಶಗಳು ರಕ್ಷಣಾ ಅಥವಾ ಪರಿಹಾರ ಕಾರ್ಯಗಳಿಗೆ ಬೆಂಬಲ ನೀಡಲು ಮುಂದೆ ಬಂದಿಲ್ಲ ಎಂದು ಆಫ್ಘಾನಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…