ತೈಪೆ: ತೈವಾನ್ನಲ್ಲಿ ಇಂದು ( ಏಪ್ರಿಲ್ 3 ) ಬೆಳಗ್ಗೆ 9.4ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಇಲ್ಲಿಯವರೆಗೂ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇನ್ನು ಕಳೆದ 25 ವರ್ಷಗಳಲ್ಲಿ ತೈವಾನ್ನಲ್ಲಿ ಉಂಟಾಗಿರುವ ಅತಿದೊಡ್ಡ ಭೂಕಂಪ ಇದಾಗಿದೆ. ಈ ಭೂಕಂಪಕ್ಕೆ ಪೂರ್ವ ಕರಾವಳಿಯ ಹುವಾಲಿಯನ್ ಕೌಂಟಿಯಲ್ಲಿ ಭಾರೀ ಹಾನಿಯುಂಟಾಗಿದೆ. ಅಲ್ಲಿನ ಹತ್ತು ಅಂತಸ್ತಿನ ಕಟ್ಟಡವೊಂದು ರಸ್ತೆಗೆ ವಾಲಿದ್ದು, ಇದರಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ ತೈವಾನ್ ಹಾಗೂ ಓಕಿನಾವಾ, ಜಪಾನ್ ಹಾಗೂ ಫಿಲಿಫೈನ್ಸ್ನಲ್ಲಿ ಸುನಾಮಿ ಮುನ್ನೆಚ್ಚರಿಕೆಯನ್ನೂ ಸಹ ನೀಡಲಾಗಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…