ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.
ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.
ಈ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆಗೆ ನೀಡಿರುವ ಸೂಚನೆಗಳು:
೧) ಕ್ವಾರಂಟೈನ್ ಸೆಂಟರ್ ಗುರುತು ಮಾಡಿ
೨) ಐಸೋಲೇಷನ್ ಸೌಲಭ್ಯ ಇರುವ ಕ್ವಾರಂಟೈನ್ ಸೆಂಟರ್
೩) ಹೆಲ್ತ್ ಸ್ಕ್ರೀನಿಂಗ್ಗೆ ಸಿಬ್ಬಂದಿಯನ್ನು ಹೆಚ್ಚಳ ಮಾಡಿಕೊಳ್ಳಿ
೪) ಶಂಕಿತ ಕೇಸ್ಗಳಿದ್ದರೆ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ನಿಯೋಜಿಸಿ
೫) ಎಬೋಲಾ ಚಿಕಿತ್ಸೆ ಬಗ್ಗೆ ಹೆಲ್ತ್ ವರ್ಕರ್ಸ್ ಅರಿವು ಮೂಡಿಸುವಂತೆ ಸೂಚನೆ
ಎಬೋಲಾ ಬಂದ ರೋಗಿ ಅನುಸರಿಸಬೇಕಾದ ಕ್ರಮಗಳು:
೧) ಪ್ರತ್ಯೇಕ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೨) ಬಾತ್ರೂಮ್ ಇರುವ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೩) ಕೊಠಡಿ ಪ್ರವೇಶಕ್ಕೆ ಪಿಪಿಇ ಕಿಟ್ ಕಡ್ಡಾಯವಾಗಿ ಧರಿಸಬೇಕು
೪) ಪ್ರತಿ 2 ಗಂಟೆಗೆ ಒಮ್ಮೆ ಆಕ್ಸಿಜನ್ ರಕ್ತದ ಆಮ್ಲಜನಕ ಪರೀಕ್ಷಿಸಬೇಕು
೫) 2 ಗಂಟೆಗೆ ಒಮ್ಮೆ ಕಾರ್ಡಿಯಾಕ್ ಟೆಸ್ಟ್ ಆಗಬೇಕು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…