ದೇಶ- ವಿದೇಶ

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.

ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್‌ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.

ಈ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಆರೋಗ್ಯ ಇಲಾಖೆಗೆ ನೀಡಿರುವ ಸೂಚನೆಗಳು:
೧) ಕ್ವಾರಂಟೈನ್‌ ಸೆಂಟರ್‌ ಗುರುತು ಮಾಡಿ
೨) ಐಸೋಲೇಷನ್‌ ಸೌಲಭ್ಯ ಇರುವ ಕ್ವಾರಂಟೈನ್‌ ಸೆಂಟರ್‌
೩) ಹೆಲ್ತ್‌ ಸ್ಕ್ರೀನಿಂಗ್‌ಗೆ ಸಿಬ್ಬಂದಿಯನ್ನು ಹೆಚ್ಚಳ ಮಾಡಿಕೊಳ್ಳಿ
೪) ಶಂಕಿತ ಕೇಸ್‌ಗಳಿದ್ದರೆ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್‌ ನಿಯೋಜಿಸಿ
೫) ಎಬೋಲಾ ಚಿಕಿತ್ಸೆ ಬಗ್ಗೆ ಹೆಲ್ತ್‌ ವರ್ಕರ್ಸ್‌ ಅರಿವು ಮೂಡಿಸುವಂತೆ ಸೂಚನೆ

ಎಬೋಲಾ ಬಂದ ರೋಗಿ ಅನುಸರಿಸಬೇಕಾದ ಕ್ರಮಗಳು:
೧) ಪ್ರತ್ಯೇಕ ಕೊಠಡಿಯಲ್ಲಿ ಐಸೊಲೇಟ್‌ ಆಗಬೇಕು
೨) ಬಾತ್‌ರೂಮ್‌ ಇರುವ ಕೊಠಡಿಯಲ್ಲಿ ಐಸೊಲೇಟ್‌ ಆಗಬೇಕು
೩) ಕೊಠಡಿ ಪ್ರವೇಶಕ್ಕೆ ಪಿಪಿಇ ಕಿಟ್‌ ಕಡ್ಡಾಯವಾಗಿ ಧರಿಸಬೇಕು
೪) ಪ್ರತಿ 2 ಗಂಟೆಗೆ ಒಮ್ಮೆ ಆಕ್ಸಿಜನ್‌ ರಕ್ತದ ಆಮ್ಲಜನಕ ಪರೀಕ್ಷಿಸಬೇಕು
೫) 2 ಗಂಟೆಗೆ ಒಮ್ಮೆ ಕಾರ್ಡಿಯಾಕ್‌ ಟೆಸ್ಟ್‌ ಆಗಬೇಕು

 

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

10 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

10 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

11 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

12 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

14 hours ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

14 hours ago