ದೇಶ- ವಿದೇಶ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇಡಿ

ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಸಮನ್ಸ್‌ ಹೊರಡಿಸುವ ಸಾಧ್ಯತೆಗಳಿವೆ ಎಂದೂ ಸಹ ಮೂಲಗಳು ತಿಳಿಸಿವೆ. ಕೇಂದ್ರ ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ ಸಲ್ಲಿಸಿದ ದೂರಿನಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ದೂರಿನಲ್ಲಿ 2018-19ರ ಅವಧಿಯಲ್ಲಿ ಕೊಚ್ಚಿನ್‌ ಮಿನರಲ್ಸ್‌ ಹಾಗೂ ರುಟೈಲ್‌ ಲಿಮಿಟೆಡ್‌ ಎಂಬ ಕಂಪನಿ ಯಾವುದೇ ಸೇವೆಯನ್ನು ಪಡೆಯದಿದ್ದರೂ ಸಹ ವೀಣಾ ಒಡೆತನದ ಎಕ್ಸ್‌ ಲಾಜಿಕ್‌ ಸೆಲ್ಯೂಷನ್‌ಗೆ 1.72 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ಪಾವತಿಸಲಾಗಿದೆ ಎಂದು ಆರೋಪಿಸಲಾಗಿದೆ.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

54 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago