ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.
ಬೆಂಗಳೂರಿನಲ್ಲಿ ಪಿಣರಾಯಿ ವಿಜಯನ್ ಪುತ್ರಿ ಟಿ.ವೀಣಾ ಒಡೆತನದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಹೆಸರಿನ ಐಟಿ ಕಂಪನಿ, ವೀಣಾ ನಿವಾಸ ಸೇರಿದಂತೆ ಬೆಂಗಳೂರಿನ 3 ಕಡೆ ಇ.ಡಿ ದಾಳಿ ನಡೆಸಿದೆ.
ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.




