ಹೊಸದಿಲ್ಲಿ : ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಅನಿಲ್ ಅಂಬಾನಿಗೆ ಸೇರಿದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆಸ್ತಿಗಳ ಪೈಕಿ ಮುಂಬೈನ ಪಾಲಿ ಹಿಲ್ ನಲ್ಲಿರುವ ಅನಿಲ್ ಅಂಬಾನಿಯ ನಿವಾಸ ಹಾಗೂ ಅವರ ಒಡೆತನದ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದ ಇನ್ನಿತರ ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಸೇರಿವೆ ಎನ್ನಲಾಗಿದೆ.
ಇದನ್ನೂ ಓದಿ:-ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್
ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್ಗೆ ಸಂಬಂಧಿಸಿದ ಜಮೀನು, ದಿಲ್ಲಿ, ನೋಯ್ಡಾ, ಘಾಝಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿ ನಗರಗಳಲ್ಲಿರುವ ಇನ್ನಿತರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 3,084 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್ ಬ್ಯಾಂಕ್ 3,000 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನ ಗ್ರೂಪ್ನ ಇತರ ಶೆಲ್ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಆರೋಪಿಸಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…