ದೇಶ- ವಿದೇಶ

ಅಂಬಾನಿ ಒಡೆತನದ 3 ಸಾವಿರ ಕೋಟಿ ಮೌಲ್ಯದ ಆಸ್ತಿ ಇಡಿ ವಶಕ್ಕೆ

ಹೊಸದಿಲ್ಲಿ : ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಅನಿಲ್ ಅಂಬಾನಿಗೆ ಸೇರಿದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆಸ್ತಿಗಳ ಪೈಕಿ ಮುಂಬೈನ ಪಾಲಿ ಹಿಲ್ ನಲ್ಲಿರುವ ಅನಿಲ್ ಅಂಬಾನಿಯ ನಿವಾಸ ಹಾಗೂ ಅವರ ಒಡೆತನದ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದ ಇನ್ನಿತರ ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಸೇರಿವೆ ಎನ್ನಲಾಗಿದೆ.

ಇದನ್ನೂ ಓದಿ:-ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್‌

ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸಂಬಂಧಿಸಿದ ಜಮೀನು, ದಿಲ್ಲಿ, ನೋಯ್ಡಾ, ಘಾಝಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿ ನಗರಗಳಲ್ಲಿರುವ ಇನ್ನಿತರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 3,084 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಆರೋಪಿಸಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago