ಹೊಸದಿಲ್ಲಿ : ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಅನಿಲ್ ಅಂಬಾನಿಗೆ ಸೇರಿದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆಸ್ತಿಗಳ ಪೈಕಿ ಮುಂಬೈನ ಪಾಲಿ ಹಿಲ್ ನಲ್ಲಿರುವ ಅನಿಲ್ ಅಂಬಾನಿಯ ನಿವಾಸ ಹಾಗೂ ಅವರ ಒಡೆತನದ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದ ಇನ್ನಿತರ ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಸೇರಿವೆ ಎನ್ನಲಾಗಿದೆ.
ಇದನ್ನೂ ಓದಿ:-ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್
ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್ಗೆ ಸಂಬಂಧಿಸಿದ ಜಮೀನು, ದಿಲ್ಲಿ, ನೋಯ್ಡಾ, ಘಾಝಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿ ನಗರಗಳಲ್ಲಿರುವ ಇನ್ನಿತರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 3,084 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್ ಬ್ಯಾಂಕ್ 3,000 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನ ಗ್ರೂಪ್ನ ಇತರ ಶೆಲ್ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಆರೋಪಿಸಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…