ದೇಶ- ವಿದೇಶ

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಶನಿವಾರ ಹೇಳಿದೆ.

ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಕವಾಗುವ ಅಂಶಗಳಿವೆ ಎಂದು ಆರೋಪಿಸುವ ವರದಿಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ವರದಿಗಳು ಜನರನ್ನು ತಪ್ಪು ದಾರಿಗೆ ಎಳೆಯುವುದಲ್ಲದೆ, ಅನಗತ್ಯವಾಗಿ ಆತಂಕವನ್ನು ಸೃಷ್ಟಿ ಮಾಡಿದೆ ಎಂದು ಹೇಳಿದೆ.

ಇದನ್ನೂ ಓದಿ:-‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್ ಅಂಶ ಪತ್ತೆಯಾಗಿದೆ. ಇದು ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದುಸಾಮಾಜಿಕ ಮಾಧ್ಯಮಗಳಲ್ಲಿ ವರದಿಗಳು ಹರಿದಾಡಿದ್ದವು. ಇದಕ್ಕೆ ಸ್ಪಷ್ಟೀಕರಣ ನೀಡಿದ ಎಫ್‌ಎಸ್‌ಎಸ್‌ಎಐ, ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಕಾರ, ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯಎಲ್ಲ ಹಂತದಲ್ಲಿ ನೈಟ್ರೋಫ್ಯೂರಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಯಾವುದೇ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆಯು ಮೊಟ್ಟೆ ಸೇವನೆಯು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಹೇಳಿಲ್ಲ ಎಂದುಎಫ್‌ಎಸ್‌ಎಸ್‌ಎಐ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

24 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

26 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

30 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

36 mins ago