ನವದೆಹಲಿ: ಸಂಸತ್ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ.
ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್ ರೆಡ್ಡಿ ವಿರುದ್ಧ ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಆಯ್ಕೆಯಾಗುವುದು ಖಚಿತವಾಗಿದೆ.
ಲೋಕಸಭೆಯ 543, ರಾಜ್ಯಸಭೆಯ 245 ಸದಸ್ಯರು ಸೇರಿ 788 ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇವರನ್ನು ಎಲೆಕ್ಟ್ರೋರಲ್ ಕಾಲೇಜ್ ಎಂದು ಕರೆಯಲಾಗುತ್ತದೆ. ಪ್ರಸ್ತುತ ಲೋಕಸಭೆಯಲ್ಲಿ ಒಂದು ರಾಜ್ಯಸಭೆಯಲ್ಲಿ ಆರು ಸ್ಥಾನ ಖಾಲಿಯಿದ್ದು, 781 ಸಂಸದರು ಮತ ಚಲಾಯಿಸಲಿದ್ದಾರೆ.
ಚುನಾವಣೆಯಲ್ಲಿ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ಗೌಪ್ಯ ಮತದಾನ ನಡೆಯಲಿದ್ದು, ಸಂಸದರು ಯಾವ ಅಭ್ಯರ್ಥಿಗೆ ಬೇಕಾದರೂ ಮತ ಹಾಕಬಹುದು. ಆಡಳಿತ ಹಾಗೂ ವಿಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ ಸರಳ ಬಹುಮತ ಪಡೆದವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲಿದ್ದಾರೆ.
ವಿಜೇತರಾಗಲು ಕನಿಷ್ಠ 391 ಮತಗಳ ಅಗತ್ಯವಿದೆ. ಇಂದೇ ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಗಲಿದೆ. ಎನ್ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್, ಇಂಡಿಯಾ ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಸ್ಪರ್ಧಿಸಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…