ನವದೆಹಲಿ: ಸಂಸತ್ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ.
ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್ ರೆಡ್ಡಿ ವಿರುದ್ಧ ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಆಯ್ಕೆಯಾಗುವುದು ಖಚಿತವಾಗಿದೆ.
ಲೋಕಸಭೆಯ 543, ರಾಜ್ಯಸಭೆಯ 245 ಸದಸ್ಯರು ಸೇರಿ 788 ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇವರನ್ನು ಎಲೆಕ್ಟ್ರೋರಲ್ ಕಾಲೇಜ್ ಎಂದು ಕರೆಯಲಾಗುತ್ತದೆ. ಪ್ರಸ್ತುತ ಲೋಕಸಭೆಯಲ್ಲಿ ಒಂದು ರಾಜ್ಯಸಭೆಯಲ್ಲಿ ಆರು ಸ್ಥಾನ ಖಾಲಿಯಿದ್ದು, 781 ಸಂಸದರು ಮತ ಚಲಾಯಿಸಲಿದ್ದಾರೆ.
ಚುನಾವಣೆಯಲ್ಲಿ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ಗೌಪ್ಯ ಮತದಾನ ನಡೆಯಲಿದ್ದು, ಸಂಸದರು ಯಾವ ಅಭ್ಯರ್ಥಿಗೆ ಬೇಕಾದರೂ ಮತ ಹಾಕಬಹುದು. ಆಡಳಿತ ಹಾಗೂ ವಿಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ ಸರಳ ಬಹುಮತ ಪಡೆದವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲಿದ್ದಾರೆ.
ವಿಜೇತರಾಗಲು ಕನಿಷ್ಠ 391 ಮತಗಳ ಅಗತ್ಯವಿದೆ. ಇಂದೇ ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಗಲಿದೆ. ಎನ್ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್, ಇಂಡಿಯಾ ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಸ್ಪರ್ಧಿಸಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…